ಆ್ಯಪ್ನಗರ

ಚೆನ್ನೈನಲ್ಲಿ ಎನ್‌ಐಎ ಭರ್ಜರಿ ಬೇಟೆ: ಜೆಎಂಬಿ ಭಯೋತ್ಪಾದಕ ಸಂಘಟನೆ ನಾಯಕ ಅರೆಸ್ಟ್

ಜೆಎಂಬಿ ಉಗ್ರ ಸಂಘಟನೆ ನಾಯಕನೊಬ್ಬನನ್ನು ತಮಿಳುನಾಡಿನ ಚೆನ್ನೈನಲ್ಲಿ ಬಂಧಿಸಲಾಗಿದೆ.

TIMESOFINDIA.COM 10 Sep 2019, 3:02 pm
ಚೆನ್ನೈ: ಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶ (ಜೆಎಂಬಿ) ಉಗ್ರ ಸಂಘಟನೆಯ ನಾಯಕ ಅಸದುಲ್ಲಾ ಎಸ್‌ ಕೆ ಅಲಿಯಾಸ್ ರಾಜಾ (35) ಎಂಬವನನ್ನು ಚೆನ್ನೈನ ನೀಲಂಕಾರೈ ಪ್ರದೇಶದ ಅಡಗುತಾಣದಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
Vijaya Karnataka Web Jmb


ಪಶ್ಚಿಮ ಬಂಗಾಳದ ಬುರ್ದಾನ್ ಮೂಲದ ಅಸದುಲ್ಲಾ, ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ. ಖಚಿತ ಮಾಹಿತಿ ಪಡೆದ ಎನ್‌ಐಎ ಅಧಿಕಾರಿಗಳು ಚೆನ್ನೈ ಪೊಲೀಸರ ಸಹಕಾರ ಪಡೆದು ಆತನನ್ನು ಬಂಧಿಸಿದ್ದಾರೆ.

ಕಳೆದ 10 ತಿಂಗಳಿಂದ ನೀಲಂಕಾರೈ ಪ್ರದೇಶದ ಬಾಡಿಗೆ ಮನೆಯಲ್ಲಿ ಭಯೋತ್ಪಾದಕ ಅಸದುಲ್ಲಾ ನೆಲೆಸಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಈತ ಚೆನ್ನೈನಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿದ್ದನೇ ಎನ್ನುವುದರ ಕುರಿತು ಎನ್‌ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ