ಚೆನ್ನೈ: ಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶ (ಜೆಎಂಬಿ) ಉಗ್ರ ಸಂಘಟನೆಯ ನಾಯಕ ಅಸದುಲ್ಲಾ ಎಸ್ ಕೆ ಅಲಿಯಾಸ್ ರಾಜಾ (35) ಎಂಬವನನ್ನು ಚೆನ್ನೈನ ನೀಲಂಕಾರೈ ಪ್ರದೇಶದ ಅಡಗುತಾಣದಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ಬುರ್ದಾನ್ ಮೂಲದ ಅಸದುಲ್ಲಾ, ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ. ಖಚಿತ ಮಾಹಿತಿ ಪಡೆದ ಎನ್ಐಎ ಅಧಿಕಾರಿಗಳು ಚೆನ್ನೈ ಪೊಲೀಸರ ಸಹಕಾರ ಪಡೆದು ಆತನನ್ನು ಬಂಧಿಸಿದ್ದಾರೆ.
ಕಳೆದ 10 ತಿಂಗಳಿಂದ ನೀಲಂಕಾರೈ ಪ್ರದೇಶದ ಬಾಡಿಗೆ ಮನೆಯಲ್ಲಿ ಭಯೋತ್ಪಾದಕ ಅಸದುಲ್ಲಾ ನೆಲೆಸಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಈತ ಚೆನ್ನೈನಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿದ್ದನೇ ಎನ್ನುವುದರ ಕುರಿತು ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಪಶ್ಚಿಮ ಬಂಗಾಳದ ಬುರ್ದಾನ್ ಮೂಲದ ಅಸದುಲ್ಲಾ, ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ. ಖಚಿತ ಮಾಹಿತಿ ಪಡೆದ ಎನ್ಐಎ ಅಧಿಕಾರಿಗಳು ಚೆನ್ನೈ ಪೊಲೀಸರ ಸಹಕಾರ ಪಡೆದು ಆತನನ್ನು ಬಂಧಿಸಿದ್ದಾರೆ.
ಕಳೆದ 10 ತಿಂಗಳಿಂದ ನೀಲಂಕಾರೈ ಪ್ರದೇಶದ ಬಾಡಿಗೆ ಮನೆಯಲ್ಲಿ ಭಯೋತ್ಪಾದಕ ಅಸದುಲ್ಲಾ ನೆಲೆಸಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಈತ ಚೆನ್ನೈನಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿದ್ದನೇ ಎನ್ನುವುದರ ಕುರಿತು ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.