ಆ್ಯಪ್ನಗರ

ನೀರವ್‌ ಮೋದಿ, ಚೋಕ್ಸಿಗೆ ಸಮನ್ಸ್‌

ದೇಶತೊರೆದ ಆರ್ಥಿಕ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ರೂಪಿಸಲಾಗಿರುವ ನೂತನ ಕಾಯಿದೆ ಅಡಿಯಲ್ಲಿ ನೀರವ್‌ ಮೋದಿ ಹಾಗೂ ಮೆಹುಲ್‌ ಚೊಕ್ಸಿ ಅವರಿಗೆ ಇಲ್ಲಿನ ವಿಶೇಷ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ.

Vijaya Karnataka 27 Jul 2018, 10:34 am
ಮುಂಬಯಿ: ದೇಶತೊರೆದ ಆರ್ಥಿಕ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ರೂಪಿಸಲಾಗಿರುವ ನೂತನ ಕಾಯಿದೆ ಅಡಿಯಲ್ಲಿ ನೀರವ್‌ ಮೋದಿ ಹಾಗೂ ಮೆಹುಲ್‌ ಚೊಕ್ಸಿ ಅವರಿಗೆ ಇಲ್ಲಿನ ವಿಶೇಷ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ.
Vijaya Karnataka Web nirav modi mehul choksi


ಜಾರಿ ನಿರ್ದೇಶನಾಲಯದ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ, ಪಿಎನ್‌ಬಿ ಹಗರಣದಲ್ಲಿ ವಿಚಾರಣೆ ಎದುರಿಸಲು ಸೆ.25ರಂದು ನೀರವ್‌ ಮೋದಿ ಹಾಗೂ ಸೆ.26ರಂದು ಮೆಹುಲ್‌ ಚೋಕ್ಸಿ ಹಾಜರಾಗಬೇಕೆಂದು ಆದೇಶ ನೀಡಿದೆ.

ಇತ್ತೀಚೆಗಷ್ಟೇ ಜಾರಿ ನಿರ್ದೇಶನಾಲಯವು ವಜ್ರದ ವ್ಯಾಪಾರಿಗಳಾದ ನೀರವ್‌ ಮೋದಿ ಮತ್ತು ಚೋಕ್ಸಿ ಅವರನ್ನು ದೇಶ ತೊರೆದ ಆರ್ಥಿಕ ಅಪರಾಧಿಗಳೆಂದು ಘೋಷಿಸಬೇಕೆಂದು ಕೋರಿ ಅಕ್ರಮ ಹಣ ವಹಿವಾಟು ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ಕೋರ್ಟ್‌ಗೆ (ಪಿಎಂಎಲ್‌ಎ ಕೋರ್ಟ್‌) ಮನವಿ ಸಲ್ಲಿಸಿತ್ತು. ಅಲ್ಲದೆ, 3,500 ಕೋಟಿ ರೂ. ಮೌಲ್ಯದ ಈ ಹಗರಣದಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ನೀಡುವಂತೆಯೂ ಇ.ಡಿ ಕೇಳಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ