ಆ್ಯಪ್ನಗರ

ನಿರ್ಭಯಾ ಪ್ರಕರಣ: ಅಪರಾಧಿಗಳಿಂದ ಶೀಘ್ರವೇ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ

ವಿಚಾರಣೆಯನ್ನು ಏ.6ಕ್ಕೆ ಮುಂದೂಡಿದ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಅನು ಗ್ರೋವರ್‌ ಬಾಳಿಗಾ, ಅಂದು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ತಿಹಾರ್‌ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Vijaya Karnataka 3 Mar 2019, 5:00 am
ಹೊಸದಿಲ್ಲಿ: 2012ರ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಮೂವರು ಆರೋಪಿಗಳು ಸುಪ್ರಿಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
Vijaya Karnataka Web nirbhaya case convicts may soon file curative petition against death penalty
ನಿರ್ಭಯಾ ಪ್ರಕರಣ: ಅಪರಾಧಿಗಳಿಂದ ಶೀಘ್ರವೇ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ


ಅಪರಾಧಿಗಳನ್ನು ಶೀಘ್ರ ಗಲ್ಲಿಗೆ ಏರಿಸಬೇಕು ಎಂದು ಕೋರಿ ನಿರ್ಭಯಾ ಪೋಷಕರು ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಅಪರಾಧಿಗಳ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ. ''ಮರಣದಂಡನೆ ಪ್ರಶ್ನಿಸಿ ಶೀಘ್ರದಲ್ಲೇ ಆರೋಪಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ. ಹೀಗಾಗಿ ಗಲ್ಲಿಗೆ ಏರಿಸುವ ಸಂಬಂಧ ಯಾವುದೇ ಆದೇಶ ಹೊರಡಿಸಬಾರದು,'' ಎಂದು ವಕೀಲ ಎ.ಪಿ.ಸಿಂಗ್‌ ಕೋರ್ಟ್‌ಗೆ ತಿಳಿಸಿದರು. ವಿಚಾರಣೆಯನ್ನು ಏ.6ಕ್ಕೆ ಮುಂದೂಡಿದ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಅನು ಗ್ರೋವರ್‌ ಬಾಳಿಗಾ, ಅಂದು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ತಿಹಾರ್‌ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

''ಅಪರಾಧಿಗಳ ಗಲ್ಲು ಶಿಕ್ಷೆಗೆ ಇಡೀ ದೇಶ ಕಾಯುತ್ತಿದೆ. ಅಲ್ಲದೇ ಇಡೀ ಜಗತ್ತು ಭಾರತೀಯ ನ್ಯಾಯಾಂಗ ವ್ಯವಸ್ಥೆಯನ್ನು ಕುತೂಹಲದಿಂದ ಗಮನಿಸುತ್ತಿದೆ,'' ಎಂದು ನಿರ್ಭಯಾ ಪೋಷಕರು ಅರ್ಜಿಯಲ್ಲಿ ಹೇಳಿದ್ದಾರೆ.

2012ರ ಡಿಸೆಂಬರ್‌ 16ರ ಮಧ್ಯರಾತ್ರಿ 23 ವರ್ಷದ ಪ್ಯಾರಾಮೆಡಿಕಲ್‌ ವಿದ್ಯಾರ್ಥಿನಿಯನ್ನು ದಕ್ಷಿಣ ದಿಲ್ಲಿಯಲ್ಲಿ ಚಲಿಸುತ್ತಿರುವ ಬಸ್ಸಿನಲ್ಲಿ ಆರು ಮಂದಿ ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿ, ಕ್ರೂರವಾಗಿ ಹಿಂಸಿಸಿ, ಅಮಾನೀಯವಾಗಿ ರಸ್ತೆಯಲ್ಲಿ ಎಸೆದು ಹೋಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ