ಹೊಸದಿಲ್ಲಿ: ಇನ್ನೇನು ನಿರ್ಭಯಾ ಪ್ರಕರಣದ ಅತ್ಯಾಚಾರಿಗಳು ಗಲ್ಲಿಗೇರಲಿದ್ದಾರೆ ಎಂಬ ನಿರೀಕ್ಷೆಯ ನಡುವೆ ಸುಪ್ರೀಂ ಕೋರ್ಟ್ ಮರು ಪರಿಶೀಲನಾ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ಇದೇ ಡಿಸೆಂಬರ್ 17ರಂದು ಅತ್ಯಾಚಾರಿಗಳಲ್ಲೊಬ್ಬ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಲಿದೆ.
2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅಕ್ಷಯ್ ಕುಮಾರ್ ಸಿಂಗ್ ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ್ದ. ಸಿಂಗ್ ಹಾಗೂ ಇತರ ಮೂವರು ಆಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು 2017ರಲ್ಲಿ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಈತ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ್ದಾನೆ.
ಕಳೆದ ವರ್ಷ ಜುಲೈ 9 ರಂದು ಇತರ ಮೂವರು ಅಪರಾಧಿಗಳಾದ ಮುಖೇಶ್, ಪವನ್ ಕುಮಾರ್ ಗುಪ್ತಾ ಮತ್ತು ವಿನಯ್ ಶರ್ಮಾ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಈ ಮೂವರು ಅಪರಾಧಿಗಳು ಸದ್ಯ ತಿಹಾರ್ ಜೈಲಿನಲ್ಲಿದ್ದು, ಗುಪ್ತಾ ಮಾತ್ರ ಮಂಡೋಲಿ ಜೈಲಿನಲ್ಲಿದ್ದಾನೆ. ಈತನನ್ನು ಕೆಲವೇ ದಿನಗಳ ಹಿಂದೆ ತಿಹಾರ್ ಜೈಲಿಗೆ ವರ್ಗಾಯಿಸಲಾಗಿದೆ.
ನಿರ್ಭಯಾ ಅತ್ಯಾಚಾರ ಪ್ರಕರಣ: ಅಪರಾಧಿಯಿಂದಲೇ ಕ್ಷಮಾದಾನ ಅರ್ಜಿ ವಾಪಸ್!
ಈ ಹಿಂದೆ ಅಕ್ಷಯ್ ಕುಮಾರ್ ಸಿಂಗ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿರಲಿಲ್ಲ. ಹೀಗಾಗಿ ಈತ ಈಗ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದು ಸುಪ್ರೀಂ ಕೋರ್ಟ್ ಇದರ ವಿಚಾರಣೆಯನ್ನು ಡಿಸೆಂಬರ್ 17ರಂದು ಕೈಗೆತ್ತಿಕೊಳ್ಳಲಿದೆ. ಇದರಿಂದ ಆಪರಾಧಿಗಳನ್ನು ಗಲ್ಲಿಗೇರುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ನಿರ್ಭಯಾ ತಾಯಿ, "ಸುಪ್ರೀಂ ಕೋರ್ಟ್ ಮರು ಪರಿಶೀಲನಾ ಅರ್ಜಿಯನ್ನು ವಿಚಾರಣೆಗೆ ನಡೆಸಬೇಕು ಆದರೆ ಬೇಡಿಕೆಯನ್ನು ತಳ್ಳಿ ಹಾಕಬೇಕು," ಎಂದಿದ್ದಾರೆ. ನಮಗೆ ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳದೆ ಬೇರೆ ವಿಧಿಯಿಲ್ಲ ಎಂದು ಅವರು ಹೇಳಿದ್ದಾರೆ.
2013ರಲ್ಲಿ ದೆಹಲಿಯ ವಿಶೇಷ ತ್ವರಿತಗತಿಯ ನ್ಯಾಯಾಲಯ ನಾಲ್ವರೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಇದನ್ನು ದೆಹಲಿ ಹೈಕೋರ್ಟ್ 2014ರಲ್ಲಿ ಎತ್ತಿ ಹಿಡದಿತ್ತು. 16 ಡಿಸೆಂಬರ್ 2012ರಲ್ಲಿ 23 ವರ್ಷದ ಯುವತಿಯನ್ನು ಒಟ್ಟು ಆರು ಜನ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು. ಜೊತೆಗೆ ಆಕೆಯ ಮೇಲೆ ತೀವ್ರ ಹಲ್ಲೆಯನ್ನೂ ನಡೆಸಿದ್ದರು. ಕೊನೆಗೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 29ರಂದು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಅಸುನೀಗಿದ್ದರು.
ಅತ್ಯಾಚಾರ ಎಸಗಿದವರಲ್ಲಿ ಓರ್ವ ಅಪ್ರಾಪ್ತನಾಗಿದ್ದರಿಂದ ಆತನನ್ನು ಮೂರು ವರ್ಷಗಳ ಕಾಲ ಸುಧಾರಣಾ ಕೇಂದ್ರದಲ್ಲಿ ಇರಿಸಲಾಗಿತ್ತು. ಇನ್ನೋರ್ವ ಅಪರಾಧಿ ರಾಮ್ ಸಿಂಗ್ 2013ರ ಮಾರ್ಚ್ನಲ್ಲಿ ತಿಹಾರ್ ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದ.
2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅಕ್ಷಯ್ ಕುಮಾರ್ ಸಿಂಗ್ ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ್ದ. ಸಿಂಗ್ ಹಾಗೂ ಇತರ ಮೂವರು ಆಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು 2017ರಲ್ಲಿ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಈತ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ್ದಾನೆ.
ಕಳೆದ ವರ್ಷ ಜುಲೈ 9 ರಂದು ಇತರ ಮೂವರು ಅಪರಾಧಿಗಳಾದ ಮುಖೇಶ್, ಪವನ್ ಕುಮಾರ್ ಗುಪ್ತಾ ಮತ್ತು ವಿನಯ್ ಶರ್ಮಾ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಈ ಮೂವರು ಅಪರಾಧಿಗಳು ಸದ್ಯ ತಿಹಾರ್ ಜೈಲಿನಲ್ಲಿದ್ದು, ಗುಪ್ತಾ ಮಾತ್ರ ಮಂಡೋಲಿ ಜೈಲಿನಲ್ಲಿದ್ದಾನೆ. ಈತನನ್ನು ಕೆಲವೇ ದಿನಗಳ ಹಿಂದೆ ತಿಹಾರ್ ಜೈಲಿಗೆ ವರ್ಗಾಯಿಸಲಾಗಿದೆ.
ನಿರ್ಭಯಾ ಅತ್ಯಾಚಾರ ಪ್ರಕರಣ: ಅಪರಾಧಿಯಿಂದಲೇ ಕ್ಷಮಾದಾನ ಅರ್ಜಿ ವಾಪಸ್!
ಈ ಹಿಂದೆ ಅಕ್ಷಯ್ ಕುಮಾರ್ ಸಿಂಗ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿರಲಿಲ್ಲ. ಹೀಗಾಗಿ ಈತ ಈಗ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದು ಸುಪ್ರೀಂ ಕೋರ್ಟ್ ಇದರ ವಿಚಾರಣೆಯನ್ನು ಡಿಸೆಂಬರ್ 17ರಂದು ಕೈಗೆತ್ತಿಕೊಳ್ಳಲಿದೆ. ಇದರಿಂದ ಆಪರಾಧಿಗಳನ್ನು ಗಲ್ಲಿಗೇರುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ನಿರ್ಭಯಾ ತಾಯಿ, "ಸುಪ್ರೀಂ ಕೋರ್ಟ್ ಮರು ಪರಿಶೀಲನಾ ಅರ್ಜಿಯನ್ನು ವಿಚಾರಣೆಗೆ ನಡೆಸಬೇಕು ಆದರೆ ಬೇಡಿಕೆಯನ್ನು ತಳ್ಳಿ ಹಾಕಬೇಕು," ಎಂದಿದ್ದಾರೆ. ನಮಗೆ ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳದೆ ಬೇರೆ ವಿಧಿಯಿಲ್ಲ ಎಂದು ಅವರು ಹೇಳಿದ್ದಾರೆ.
2013ರಲ್ಲಿ ದೆಹಲಿಯ ವಿಶೇಷ ತ್ವರಿತಗತಿಯ ನ್ಯಾಯಾಲಯ ನಾಲ್ವರೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಇದನ್ನು ದೆಹಲಿ ಹೈಕೋರ್ಟ್ 2014ರಲ್ಲಿ ಎತ್ತಿ ಹಿಡದಿತ್ತು. 16 ಡಿಸೆಂಬರ್ 2012ರಲ್ಲಿ 23 ವರ್ಷದ ಯುವತಿಯನ್ನು ಒಟ್ಟು ಆರು ಜನ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು. ಜೊತೆಗೆ ಆಕೆಯ ಮೇಲೆ ತೀವ್ರ ಹಲ್ಲೆಯನ್ನೂ ನಡೆಸಿದ್ದರು. ಕೊನೆಗೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 29ರಂದು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಅಸುನೀಗಿದ್ದರು.
ಅತ್ಯಾಚಾರ ಎಸಗಿದವರಲ್ಲಿ ಓರ್ವ ಅಪ್ರಾಪ್ತನಾಗಿದ್ದರಿಂದ ಆತನನ್ನು ಮೂರು ವರ್ಷಗಳ ಕಾಲ ಸುಧಾರಣಾ ಕೇಂದ್ರದಲ್ಲಿ ಇರಿಸಲಾಗಿತ್ತು. ಇನ್ನೋರ್ವ ಅಪರಾಧಿ ರಾಮ್ ಸಿಂಗ್ 2013ರ ಮಾರ್ಚ್ನಲ್ಲಿ ತಿಹಾರ್ ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದ.