ಆ್ಯಪ್ನಗರ

ಅತ್ಯಾಚಾರಿಗಳನ್ನು ಶೀಘ್ರ ಗಲ್ಲಿಗೆ ಏರಿಸಿ: ನಿರ್ಭಯಾ ಪಾಲಕರ ಮನವಿ

ದೇಶವನ್ನೇ ಬೆಚ್ಚಿ ಬೀಳಿಸಿದ ನಿರ್ಭಯಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜುಲೈನಲ್ಲಿ ಮೂವರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್‌ ಮರಣದಂಡನೆ ವಿಧಿಸಿದೆ. ಆರೋಪಿಗಳು ತೀರ್ಪು ಪುನರ್‌ ಪರಿಶೀಲಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ.

Vijaya Karnataka 15 Feb 2019, 5:00 am
ಹೊಸದಿಲ್ಲಿ: 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಆದಷ್ಟು ಶೀಘ್ರ ಗಲ್ಲಿಗೇರಿಸಬೇಕು ಎಂದು ನಿರ್ಭಯಾ ಪೋಷಕರು ಗುರುವಾರ ಪಾಟಿಯಾಲಾ ಹೌಸ್‌ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ''ಅಪರಾಧಿಗಳನ್ನು ಶೀಘ್ರವಾಗಿ ನೇಣಿಗೆ ಏರಿಸಬೇಕು. ಇದರಲ್ಲಿ ಮತ್ತಷ್ಟು ವಿಳಂಬ ಆಗಬಾರದು,'' ಎಂದು ಅವರು ಮನವಿ ಮಾಡಿದ್ದಾರೆ.
Vijaya Karnataka Web nirbhayas parents approach patiala house court to expedite process to hang convicts
ಅತ್ಯಾಚಾರಿಗಳನ್ನು ಶೀಘ್ರ ಗಲ್ಲಿಗೆ ಏರಿಸಿ: ನಿರ್ಭಯಾ ಪಾಲಕರ ಮನವಿ


ದೇಶವನ್ನೇ ಬೆಚ್ಚಿ ಬೀಳಿಸಿದ ನಿರ್ಭಯಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜುಲೈನಲ್ಲಿ ಮೂವರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್‌ ಮರಣದಂಡನೆ ವಿಧಿಸಿದೆ. ಆರೋಪಿಗಳು ತೀರ್ಪು ಪುನರ್‌ ಪರಿಶೀಲಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ. ''ಪುನರ್‌ಪರಿಶೀಲಿನಾ ಅರ್ಜಿಯನ್ನು ತಿರಸ್ಕರಿಸುತ್ತದೆ ಎಂಬ ಭರವಸೆ ನಮಗಿದೆ. ಆದರೆ ಈಗಾಗಲೇ ಸಾಕಷ್ಟು ಸಮಯ ಆಗಿದೆ. ಈ ಅವಧಿಯಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಿವೆ. ಅಪರಾಧಿಗಳಿಗೆ ಶೀಘ್ರ ಮರಣದಂಡನೆ ವಿಧಿಸುವುದರಿಂದ ಈ ರೀತಿ ಮಾಡುವವರಿಗೆ ಎಚ್ಚರಿಕೆ ನೀಡಿದಂತಾಗುತ್ತದೆ,'' ಎಂದು ನಿರ್ಭಯಾ ತಂದೆ ಬದ್ರಿನಾಥ್‌ ಸಿಂಗ್‌ ಹೇಳಿದ್ದಾರೆ.

2012ರ ಡಿಸೆಂಬರ್‌ 16ರ ಮಧ್ಯರಾತ್ರಿ ದಕ್ಷಿಣ ದಿಲ್ಲಿಯಲ್ಲಿ ಚಲಿಸುತ್ತಿರುವ ಬಸ್ಸಿನಲ್ಲಿಯೇ ಆರು ಮಂದಿ ನಿರ್ಭಯಾಳ ಮೇಲೆ ಅತ್ಯಾಚಾರ ಎಸಗಿ, ಕ್ರೂರವಾಗಿ ಹಿಂಸಿಸಿದ್ದರು. ನಂತರ ಆಕೆಯನ್ನು ರಸ್ತೆಗೆ ಎಸೆದು ಹೋಗಿದ್ದರು. 2012ರ ಡಿ.29ರಂದು ಸಿಂಗಾಪುರದ ಮೌಂಟ್‌ ಎಲಿಜಿಬತ್‌ ಆಸ್ಪತ್ರೆಯಲ್ಲಿ ಆಕೆ ಕೊನೆಯುಸಿರೆಳೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ