ಆ್ಯಪ್ನಗರ

ಮಣಿಪುರ: ಕೊರೊನಾ ಸೋಂಕು ಮುಕ್ತ ಎಂದ ಸಿಎಂ ಬೀರೇನ್‌ ಸಿಂಗ್‌

ರಾಜ್ಯದಲ್ಲಿ ಈಗ ಯಾವುದೇ ಸಕ್ರಿಯ ಕೊರೊನಾ ಪ್ರಕರಣಗಳು ಇಲ್ಲದಿದ್ದರೂ ಜನರು ಸದಾ ಎಚ್ಚರಿಕೆಯಿಂದ ಇರಬೇಕು ಎಲ್ಲಾ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು ಎಂದು ಜನರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

Vijaya Karnataka Web 22 Apr 2020, 4:43 pm
ಇಂಫಾಲ: ಮಣಿಪುರದಲ್ಲಿ ಕೊರೊನಾ ಸೋಂಕಿತ 2ನೇ ವ್ಯಕ್ತಿಯ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಇದರೊಂದಿಗೆ ಮಣಿಪುರ ಈಗ ಕೊರೊನಾ ಸೋಂಕು ಮುಕ್ತವಾಗಿದೆ.
Vijaya Karnataka Web ಕೊರೊನಾ
ಕೊರೊನಾ


ರಾಜ್ಯದಲ್ಲಿ ಯಾವುದೇ ಕೋವಿಡ್-19 ಪ್ರಕರಣಗಳು ಇಲ್ಲ ಎಂದು ಮುಖ್ಯಮಂತ್ರಿ ಎನ್. ಬೀರೇನ್ ಸಿಂಗ್ ಹೇಳಿದ್ದಾರೆ.

ರಾಜ್ಯದಲ್ಲಿ ಈಗ ಯಾವುದೇ ಸಕ್ರಿಯ ಕೊರೊನಾ ಪ್ರಕರಣಗಳು ಇಲ್ಲದಿದ್ದರೂ ಜನರು ಸದಾ ಎಚ್ಚರಿಕೆಯಿಂದ ಇರಬೇಕು ಎಲ್ಲಾ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು ಎಂದು ಜನರಿಗೆ ಸೂಚನೆ ನೀಡಿದ್ದಾರೆ.

ಭಾರತ-ಮ್ಯಾನ್‌ಮಾರ್ ಗಡಿಪ್ರದೇಶಗಳಲ್ಲಿ ಹೆಚ್ಚುವರಿ ನಿಗಾ ವಹಿಸಲಾಗಿದೆ. ವಿಶೇಷವಾಗಿ ಚುರಾಚಂದ್ರಪುರ್ ಜಿಲ್ಲೆ ಸೇರಿದಂತೆ ಈ ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಚೆಕ್‌ಪೋಸ್ಟ್‌ಗಳನ್ನು ಬಲಿಷ್ಠಗೊಳಿಸುವಂತೆ ಪೊಲೀಸ್ ಮಹಾನಿದೇರ್ಶಕರಿಗೆ ಮುಖ್ಯಮಂತ್ರಿ ಬೀರೇನ್‌ ಸಿಂಗ್‌ ಸೂಚನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ