ಆ್ಯಪ್ನಗರ

ಜಮ್ಮು-ಕಾಶ್ಮೀರದಿಂದ ಸದ್ಯಕ್ಕಿಲ್ಲ ಸೇನೆ ಕಡಿತ

ಗೃಹ ಸಚಿವ ಅಮಿತ್‌ ಶಾ ಅವರು ಕಣಿವೆಯಲ್ಲಿ ಪರಿಸ್ಥಿತಿ ಕುರಿತು ನಿತ್ಯವೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

PTI 23 Aug 2019, 5:00 am
ಹೈದರಾಬಾದ್‌: ಕಾಶ್ಮೀರ ವಿಚಾರದಲ್ಲಿ ಕೇಂದ್ರದ ದಿಟ್ಟ ನಿರ್ಧಾರದ ಬಳಿಕ ಪಾಕಿಸ್ತಾನ ಹತಾಶಗೊಂಡಿದ್ದು ಕಾಶ್ಮೀರಿಗಳನ್ನು ಹಿಂಸೆಗೆ ಪ್ರಚೋದಿಸಿ ಕಾನೂನು ಸುವ್ಯವಸ್ಥೆ ಹಾಳುಗೆಡವಲು ಹವಣಿಸುತ್ತಿದೆ. ಕಣಿವೆಯಲ್ಲಿ ಇಂತಹ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕಂತೂ ಹೆಚ್ಚುವರಿ ಸೇನೆ ಹಿಂಪಡೆಯುವ ಆಲೋಚನೆ ಇಲ್ಲ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಜಿ.ಕಿಶನ್‌ ರೆಡ್ಡಿ ಹೇಳಿದ್ದಾರೆ.
Vijaya Karnataka Web kashmir

''ಜಮ್ಮು-ಕಾಶ್ಮೀರದಲ್ಲಿ ನಿಷೇಧಾಜ್ಞೆ ತೆರವಿನ ಬಳಿಕ ಜನಜೀವನ ಸಹಜ ಸ್ಥಿತಿಗೆ ಮರಳಿದ್ದು ಪರಿಸ್ಥಿತಿ ಶಾಂತವಾಗಿದೆ. ಶಾಲಾ-ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿವೆ. ಗೃಹ ಸಚಿವ ಅಮಿತ್‌ ಶಾ ಅವರು ಕಣಿವೆಯಲ್ಲಿ ಪರಿಸ್ಥಿತಿ ಕುರಿತು ನಿತ್ಯವೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಪಾಕಿಸ್ತಾನವೂ ಕಾಶ್ಮೀರಿಗಳನ್ನು ಪ್ರಚೋದಿಸುತ್ತಿದೆ. ಜತೆಗೆ ಗಡಿಯಲ್ಲಿ ತನ್ನ ಉದ್ಧಟತನ ಮುಂದುವರಿಸಿದೆ. ಹೀಗಾಗಿ ಸದ್ಯಕ್ಕಂತೂ ಕಾಶ್ಮೀರದಿಂದ ಹೆಚ್ಚುವರಿ ಸೇನೆಯನ್ನು ಹಿಂಪಡೆಯುವುದಿಲ್ಲ,'' ಎಂದು ರೆಡ್ಡಿ ಹೇಳಿದ್ದಾರೆ.
ಬಿಡುಗಡೆ ವಿಚಾರದಲ್ಲಿ ಸ್ಪಷ್ಟತೆ ಇಲ್ಲ: ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್‌ ಅಬ್ದುಲ್ಲಾ, ಒಮರ್‌ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ರಾಜಕೀಯ ಗಣ್ಯರ ಬಂಧನ ಅವಧಿ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಗಳಿವೆ. ಪರಿಸ್ಥಿತಿಯನ್ನು ಆಧರಿಸಿಕೊಂಡು ಸ್ಥಳೀಯ ಆಡಳಿತ ಅವರನ್ನು ಬಿಡುಗಡೆಗೊಳಿಸುವ ನಿರ್ಧಾರ ಕೈಗೊಳ್ಳಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ