ಆ್ಯಪ್ನಗರ

ಮುಂಬರುವ ಚುನಾವಣೆಯಲ್ಲಿ ಪ್ಲಾಸ್ಟಿಕ್‌ನಿಂದ ತಯಾರಾದ ಪ್ರಚಾರ ಸಾಮಗ್ರಿ ನಿಷೇಧ

ಚುನಾವಣೆಗಳ ವೇಳೆ ಪ್ಲಾಸ್ಟಿಕ್‌ನಿಂದ ತಯಾರಾದ ಪ್ರಚಾರ ಸಾಮಗ್ರಿಯಿಂದ ಪರಿಸರಕ್ಕೆ ಹಾನಿಯಾಗುವುದನ್ನು ತಪ್ಪಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿ ಅರ್ಜಿಯ ಆಧಾರದ ಮೇಲೆ ನ್ಯಾಯಾಧೀಕರಣ ಈ ಆದೇಶ ಹೊರಬಿದ್ದಿದೆ.

Vijaya Karnataka Web 5 Mar 2019, 6:40 pm
ಹೊಸದಿಲ್ಲಿ: ಮುಂಬರುವ ಸಾರ್ವತ್ರಿಕ ಚುನಾವಣೆಯ ವೇಳೆ ಪ್ಲಾಸ್ಟಿಕ್‌ನಿಂದ ತಯಾರಾದ ಪ್ರಚಾರ ಸಾಮಗ್ರಿಯನ್ನು ನಿಷೇಧಿಸುವ ಬಗ್ಗೆ ಪರಿಶೀಲನೆಗೆ ವಿಶೇಷ ಸಭೆಯನ್ನು ಆಯೋಜಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಚುನಾವಣಾ ಆಯೋಗ ಕೇಂದ್ರ ಸರ್ಕಾರ ಮತ್ತು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದೆ.
Vijaya Karnataka Web ಹಸಿರು
ಹಸಿರು


ನ್ಯಾಯಾಧೀಕರಣದ ಅಧ್ಯಕ್ಷರಾದ ಆದರ್ಶ ಕುಮಾರ್ ಗೋಯಲ್ ನೇತೃತ್ವದ ಪೀಠ-ಚುನಾವಣಾ ಆಯೋಗ, ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಆದಷ್ಟು ಬೇಗನೆ ಒಂದು ವಾರದೊಳಗೆ ಈ ಸಭೆಯನ್ನು ಆಯೋಜಿಸುವಂತೆ ಆದೇಶಿಸಿದೆ.

ಚುನಾವಣೆಗಳ ವೇಳೆ ಪ್ಲಾಸ್ಟಿಕ್‌ನಿಂದ ತಯಾರಾದ ಪ್ರಚಾರ ಸಾಮಗ್ರಿಯಿಂದ ಪರಿಸರಕ್ಕೆ ಹಾನಿಯಾಗುವುದನ್ನು ತಪ್ಪಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿ ಅರ್ಜಿಯ ಆಧಾರದ ಮೇಲೆ ನ್ಯಾಯಾಧೀಕರಣ ಈ ಆದೇಶ ಹೊರಬಿದ್ದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ