ಆ್ಯಪ್ನಗರ

ಇನ್ಶೂರೆನ್ಸ್ ನವೀಕರಣಗೊಳಿಸಲು PUC ಸರ್ಟಿಫಿಕೇಟ್ ಅಗತ್ಯ

ದೇಶದಲ್ಲಿ ಹೆಚ್ಚುತ್ತಿರುವ ಮಾಲಿನ್ಯವನ್ನ ನಿಯಂತ್ರಿಸುವ ಉದ್ಧೇಶದಿಂದ ಇನ್ನು ಮುಂದೆ ವಾಹನಗಳ ಇನ್ಷೂರೆನ್ಸ್‌ ನವೀಕರಣಗೊಳಿಸಲು ಪೊಲ್ಯೂಷನ್ ಅಂಡರ್ ಕಂಟ್ರೋಲ್(ಪಿಯುಸಿ) ಸರ್ಟಿಫಿಕೇಟ್ ಕಡ್ಡಾಯವಾಗಿ ಸಲ್ಲಿಸಬೇಕುಎ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಟೈಮ್ಸ್ ಆಫ್ ಇಂಡಿಯಾ 10 Aug 2017, 3:37 pm
ಹೊಸದಿಲ್ಲಿ: ದೇಶದಲ್ಲಿ ಹೆಚ್ಚುತ್ತಿರುವ ಮಾಲಿನ್ಯವನ್ನ ನಿಯಂತ್ರಿಸುವ ಉದ್ಧೇಶದಿಂದ ಇನ್ನು ಮುಂದೆ ವಾಹನಗಳ ಇನ್ಶೂರೆನ್ಸ್‌ ನವೀಕರಣಗೊಳಿಸಲು ಪೊಲ್ಯೂಷನ್ ಅಂಡರ್ ಕಂಟ್ರೋಲ್(ಪಿಯುಸಿ) ಸರ್ಟಿಫಿಕೇಟ್ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
Vijaya Karnataka Web no renewal of insurance for vehicles without pollution certificate says supreme court
ಇನ್ಶೂರೆನ್ಸ್ ನವೀಕರಣಗೊಳಿಸಲು PUC ಸರ್ಟಿಫಿಕೇಟ್ ಅಗತ್ಯ


ಮಾಲೀನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪರಿಸರವಾದಿ ಎಂಸಿ ಮೆಹ್ತಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಧೀಶರಾದ ಮದನ್ ಬಿ ಲೊಕುರ್ ನೇತೃತ್ವದ ಪೀಠ ಈ ಆದೇಶ ಹೊರ ಹಾಕಿದೆ.

ಅಲ್ಲದೇ ಇದರೊಂದಿಗೆ ಹಲವು ನಿರ್ದೇಶನಗಳನ್ನ ನೀಡಿರುವ ನ್ಯಾಯಾಲಯ, ರಾಷ್ಟ್ರರಾಜಧಾನಿಯಲ್ಲಿ ವಾಹನ ಸವಾರರು ಪಿಯುಸಿ ಸರ್ಟಿಫಿಕೇಟ್ ಪಡೆಯಲು ಸುಲಭವಾಗುವಂತೆ ಪಿಯುಸಿ ಸೆಂಟರ್‌ಗಳನ್ನು ತೆರೆಯುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯುಕ್ಕೆ ಸೂಚಿಸಿದೆ.

ಕೇಂದ್ರಕ್ಕೆ 4 ವಾರಗಳ ಗಡುವು ನೀಡಿರುವ ಸುಪ್ರೀಂ ಕೋರ್ಟ್‌, ಮುಂದಿನ ದಿನಗಳಲ್ಲಿ ರಾಷ್ಟ್ರರಾಜಧಾನಿಯಲ್ಲಿ ಪಿಯುಸಿ ಸೆಂಟರ್‌ಗಳನ್ನು ಕಾರ್ಯನಿರ್ವಹಿಸಬೇಕು, ಎಲ್ಲಾ ವಾಹನ ಮಾಲೀಕರು ಈ ಸೌಲಭ್ಯ ಬಳಸಿಕೊಳ್ಳಬೇಕು ಎಂದು ಹೇಳಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ಸಲಹೆಯ ಮೇರೆಗೆ ಕೋರ್ಟ್ ಈ ಆದೇಶ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ