ಆ್ಯಪ್ನಗರ

Nurse Kills Husband: ಗಂಡನನ್ನು ಕೊಂದ ನರ್ಸ್: ಆತ್ಮಹತ್ಯೆ ಎಂದು ಬಿಂಬಿಸಿದ್ದ ಪ್ರಕರಣಕ್ಕೆ ಮಗಳಿಂದ ಟ್ವಿಸ್ಟ್

Nurse Kills Husband: ಗಂಡನನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದ ನರ್ಸ್ ಒಬ್ಬಳು, ತನ್ನ 13 ವರ್ಷದ ಮಗಳ ಹೇಳಿಕೆಯಿಂದಲೇ ಸಿಕ್ಕಿಬಿದ್ದಿದ್ದಾಳೆ. ನರ್ಸ್ ಜತೆಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೂಡ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

Authored byಅಮಿತ್ ಎಂ.ಎಸ್ | Vijaya Karnataka Web 4 Dec 2022, 5:50 pm

ಹೈಲೈಟ್ಸ್‌:

  • ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರಿಂದ ನರ್ಸ್ ಬಂಧನ
  • ಗಂಡನನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದ ನರ್ಸ್ ಕವಿತಾ
  • ಅಮ್ಮನ ಕೃತ್ಯದ ಬಗ್ಗೆ ಪೊಲೀಸರ ಬಳಿ ಹೇಳಿದ 13 ವರ್ಷದ ಮಗಳು

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Ghaziabad murder
ಗಾಜಿಯಾಬಾದ್: ತನ್ನ ತಂದೆಯ 'ಆತ್ಮಹತ್ಯೆ' ಬಗ್ಗೆ 13 ವರ್ಷದ ಮಗಳು ಪೊಲೀಸರಿಗೆ ನೀಡಿದ ಹೇಳಿಕೆ, ಆಕೆಯ ತಾಯಿಯನ್ನೇ ಬಂಧಿಸುವಂತೆ ಮಾಡಿದೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಆತ್ಮಹತ್ಯೆ ಎಂದು ಹೇಳಲಾಗಿದ್ದ ಪ್ರಕರಣ ಕೊಲೆ ಎನ್ನುವುದು ಬೆಳಕಿಗೆ ಬಂದಿದೆ. ಈ ಹತ್ಯೆಯಲ್ಲಿ ಪಾತ್ರ ವಹಿಸಿರುವ ಆರೋಪದಲ್ಲಿ, ಮಹಿಳೆ ಜತೆ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೂಡ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ವೃತ್ತಿಯಲ್ಲಿ ನರ್ಸ್ ಆಗಿರುವ ಕವಿತಾ ಎಂಬಾಕೆಯನ್ನು ನ. 29ರಂದು ಜಗಳದ ಬಳಿಕ ಗಂಡನನ್ನು ಕೊಂದಿರುವ ಆರೋಪದಲ್ಲಿ ಬಂಧಿಸಲಾಗಿದೆ. ಕೊಲೆಯ ಬಳಿಕ ಗಂಡನ ದೇಹವನ್ನು ತಾನು ಕೆಲಸ ಮಾಡುತ್ತಿರುವ ಆಸ್ಪತ್ರೆಗೆ ಕೊಂಡೊಯ್ದ ಆಕೆ, ಬ್ಲಾಂಕೆಟ್‌ನಿಂದ ಫ್ಯಾನ್‌ಗೆ ನೇಣು ಹಾಕಿಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ವೈದ್ಯರಿಗೆ ತಿಳಿಸಿದ್ದಳು.
Odisha Murder: ಮತ್ತೊಬ್ಬನೊಂದಿಗೆ ಸಂಬಂಧ: ಲಿವ್‌ ಇನ್‌ ಗೆಳತಿಯನ್ನು ಕೊಂದು ಸುಟ್ಟು ಹಾಕಿದ ಪಾತಕಿ

ವೈದ್ಯಕೀಯ ಪ್ರಕ್ರಿಯೆ ನಡೆಸಿದ್ದ ಆಸ್ಪತ್ರೆ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತದೇಹದ ಮರಣೋತ್ತರ ಪರೀಕ್ಷೆ ವರದಿಯಲ್ಲಿ, ಕತ್ತಿನ ಸುತ್ತಲೂ ಹಿಸುಕಿದ ಗುರುತು ಇರುವುದು ಪತ್ತೆಯಾಗಿತ್ತು. ಇದು ಪೊಲೀಸರಲ್ಲಿ ಅನುಮಾನ ಮೂಡಿಸಿತ್ತು.

ಮಗಳನ್ನು ಪ್ರಶ್ನೆಗೆ ಒಳಪಡಿಸಿದ ಪೊಲೀಸರಿಗೆ ಇದರಲ್ಲಿ ಕವಿತಾ ಕೈವಾಡ ಇರುವುದು ಸ್ಪಷ್ಟವಾಗಿತ್ತು. ಅಪ್ಪನ ಬಾಯಿಯನ್ನು ಅಮ್ಮ ಒತ್ತಿಹಿಡಿಯುವುದನ್ನು ಕಿಟಕಿ ಮೂಲಕ ಕಂಡಿದ್ದಾಗಿ 13 ವರ್ಷದ ಬಾಲಕಿ ಪೊಲೀಸರಿಗೆ ತಿಳಿಸಿದ್ದಳು. ಈ ಮಾಹಿತಿ ಆಧಾರದಲ್ಲಿ ಕವಿತಾಳನ್ನು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಸಂಗತಿ ಬಾಯ್ಬಿಟ್ಟಿದ್ದಾಳೆ. ಬಳಿಕ ಆಕೆಯನ್ನು ಬಂಧಿಸಲಾಗಿದೆ.
Man Kills Wife: 1.90 ಕೋಟಿ ರೂ. ವಿಮೆ ಹಣಕ್ಕಾಗಿ ಪತ್ನಿ ಹತ್ಯೆಗೆ ಸುಪಾರಿ: 'ಅಪಘಾತ'ದ ಮರ್ಮ ಭೇದಿಸಿದ ಪೊಲೀಸರು

ದಿನವೂ ಕುಡಿದು ಬರುತ್ತಿದ್ದ ಪತಿ ಮಹೇಶ್, ತನಗೆ ಯಾವಾಗಲೂ ಹೊಡೆಯುತ್ತಿದ್ದ ಎಂದು ಕವಿತಾ ತಿಳಿಸಿದ್ದಾಳೆ. ನ. 29ರಂದು ಇದೇ ರೀತಿ ಗಲಾಟೆ ನಡೆದ ಬಳಿಕ, ಮಲಗಿದ್ದ ಗಂಡನನ್ನು ಕವಿತಾ ಕೊಂದಿದ್ದಾಳೆ. ಬಳಿಕ ಆತನ ದೇಹವನ್ನು ಆಸ್ಪತ್ರೆಗೆ ಸಾಗಿಸಿ, ಅದು ಆತ್ಮಹತ್ಯೆ ಎಂದು ಹೇಳಿದ್ದಾಳೆ.

ಆಸ್ಪತ್ರೆಯೊಂದರಲ್ಲಿ ದಾದಿಯಾಗಿದ್ದ ಆಕೆ, ವಿನಯ್ ಶರ್ಮಾ ಎಂಬಾತನ ಜತೆ ಸಂಬಂಧ ಹೊಂದಿದ್ದಳು. ಆತ ಆಸ್ಪತ್ರೆಯಲ್ಲಿ ವಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ವಾಟ್ಸಾಪ್ ಚಾಟ್‌ಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿದಾಗ, ಈ ಹತ್ಯೆಯಲ್ಲಿ ಕವಿತಾ ಮತ್ತು ವಿನಯ್ ಪಾತ್ರ ಇರುವುದು ಸಾಬೀತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ