ಆ್ಯಪ್ನಗರ

ಏ.30ರವರೆಗೆ ಲಾಕ್‌ಡೌನ್‌ ಮುಂದುವರಿಸಿದ ಒಡಿಶಾ: ಈ ನಿರ್ಧಾರ ಕೈಗೊಂಡ ಮೊದಲ ರಾಜ್ಯ

ಶಾಲಾ-ಕಾಲೇಜುಗಳಿಗೆ ಜೂನ್‌ 17ರವರಗೆ ರಜೆ ಘೋಷಿಸಲಾಗಿದೆ. ಅಲ್ಲದೇ ರಾಜ್ಯಕ್ಕೆ ಯಾವುದೇ ರೈಲು ಅಥವಾ ವಿಮಾನ ಸೇವೆಯನ್ನು ಆರಂಭಿಸಬಾರದು ಎಂದು ಕೇಂದ್ರ ಸರಕಾರಕ್ಕೆ ನವೀನ್‌ ಪಟ್ನಾಯಕ್‌ ಮನವಿ ಮಾಡಿದ್ದಾರೆ.

Vijaya Karnataka Web 9 Apr 2020, 1:46 pm
ಭುವನೇಶ್ವರ: ಕೊರೊನಾ ವೈರಸ್‌ ತಡೆಗಟ್ಟಲು ಈಗಾಗಲೇ ಜಾರಿಯಲ್ಲಿರುವ ಲಾಕ್‌ಡೌನ್‌ ಮುಂದುವರಿಸುವ ಬಗ್ಗೆ ಚಿಂತನೆ ನಡೆಯುತ್ತಿರುವ ಬೆನ್ನಲ್ಲೇ ಒಡಿಶಾದಲ್ಲಿ ಏಪ್ರಿಲ್‌ 30ರವರೆಗೆ ಲಾಕ್‌ಡೌನ್‌ ವಿಸ್ತರಿಸಲಾಗಿದೆ.
Vijaya Karnataka Web ನವೀನ್‌ ಪಟ್ನಾಯಕ್‌
ನವೀನ್‌ ಪಟ್ನಾಯಕ್‌


ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಈ ವಿಷಯವನ್ನು ತಿಳಿಸಿದ್ದಾರೆ. ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸಂಬಂಧ ವಿಡಿಯೋ ಸಂದೇಶ ನೀಡಿರುವ ನವೀನ್‌ ಪಟ್ನಾಯಕ್‌, ಏಪ್ರಿಲ್ 30ರವರೆಗೆ ಲಾಕ್‌ಡೌನ್‌ ವಿಸ್ತರಿಸಲಾಗಿದೆ. ಮೊದಲ ಹಂತದ ಲಾಕ್‌ಡೌನ್‌ ಜನರ ಶಿಸ್ತು ಮತ್ತು ಸಂಯಮ ಕೋವಿಡ್‌ 19 ವಿರುದ್ಧ ಹೋರಾಡಲು ಶಕ್ತಿ ನೀಡಿದಂತಾಗಿದೆ. ಪರಿಸ್ಥಿತಿ ಎದುರಿಸಲು ಲಾಕ್‌ಡೌನ್‌ ವಿಸ್ತರಿಸಲಾಗಿದೆ ಎಂದರು.

ಇಂಥ ಸಂಕಷ್ಟ ಪರಿಸ್ಥಿತಿಯಲ್ಲಿ ಆರ್ಥಿಕತೆಗಿಂತ ಸಾರ್ವಜನಿಕರ ಜೀವ ಮುಖ್ಯ. ಹೀಗಾಗಿ ರಾಷ್ಟ್ರಮಟ್ಟದಲ್ಲಿಯೂ ಲಾಕ್‌ಡೌನ್‌ ವಿಸ್ತರಿಸುವಂತೆ ಕೇಂದ್ರ ಸರಕಾರಕ್ಕೂ ಮನವಿ ಮಾಡಿದ್ದೇವೆ. ಶನಿವಾರದ ಸಭೆಯಲ್ಲಿಯೂ ಮಾಡುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಅಲ್ಲದೇ ಶಾಲಾ-ಕಾಲೇಜುಗಳಿಗೆ ಜೂನ್‌ 17ರವರಗೆ ರಜೆ ಘೋಷಿಸಲಾಗಿದೆ.

ಅಲ್ಲದೇ ರಾಜ್ಯಕ್ಕೆ ಯಾವುದೇ ರೈಲು ಅಥವಾ ವಿಮಾನ ಸೇವೆಯನ್ನು ಆರಂಭಿಸಬಾರದು ಎಂದು ಕೇಂದ್ರ ಸರಕಾರಕ್ಕೆ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ