ಆ್ಯಪ್ನಗರ

Amritsar bomb blast case: ಓರ್ವನ ಬಂಧನ, ಪಾಕ್‌ ಐಎಸ್‌ಐ ಕೃತ್ಯ ಎಂದ ಸಿಎಂ

ಸಂಪೂರ್ಣ ಮಾಹಿತಿ ನೀಡಿದ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌

Vijaya Karnataka Web 21 Nov 2018, 5:20 pm
ಹೊಸದಿಲ್ಲಿ: ಪಂಜಾಬ್‌ನ ಅಮೃತಸರದಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಪಾಕಿಸ್ತಾನದ ಐಎಸ್‌ಐ ನೇರ ಕೈವಾಡ ಇದೆ ಎಂದು ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಆರೋಪಿಸಿದ್ದಾರೆ.
Vijaya Karnataka Web ಅಮರೀಂದರ್‌ ಸಿಂಗ್‌
ಅಮರೀಂದರ್‌ ಸಿಂಗ್‌


ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು 26 ವರ್ಷದ ಬಿಕ್ರಮ್‌ಜಿತ್‌ ಸಿಂಗ್ ಎಂದು ಗುರುತಿಸಲಾಗಿದೆ. ಆತನಿಂದ ಮೋಟಾರ್‌ ಸೈಕಲ್‌ವೊಂದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಾರೆ ಪ್ರಕರಣದ ಕುರಿತು ಸುದ್ದಿಗೋಷ್ಠಿಯಲ್ಲಿ ಅಮರೀಂದರ್‌ ಸಿಂಗ್‌ ಮಾಹಿತಿ ನೀಡಿದರು.

ಪಾಕಿಸ್ತಾನ್‌ ಇಂಟರ್‌ ಸರ್ವೀಸಸ್‌ ಇಂಟಲಿಜೆನ್ಸ್‌ (ಐಎಸ್‌ಐ) ಕೈವಾಡವಿದೆ. ಪಂಜಾಬ್‌ನಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ. ಇದಕ್ಕೆ ಸ್ಥಳೀಯರನ್ನು ಬಳಸಿಕೊಳ್ಳುತ್ತಿದೆ ಎಂದು ಅಮರೀಂದರ್‌ ಸಿಂಗ್‌ ಆರೋಪಿಸಿದರು.

ಈ ನಡುವೆ ಸ್ಫೋಟದ ಸಂಚು ರೂಪಿಸಿರುವ ಮತ್ತೊಬ್ಬ ಆರೋಪಿ ಅವತಾರ್‌ ಸಿಂಗ್‌ ಎಂದು ಗೊತ್ತಾಗಿದ್ದು, ಈತನನ್ನ ಕೂಡಲೇ ಬಂಧಿಸಲಾಗುವುದು ಎಂದು ಸಿಂಗ್‌ ಹೇಳಿದರು.


ಇದೊಂದು ವಿಧ್ವಂಸಕ ಕೃತ್ಯವಾಗಿದ್ದು, ಇದಕ್ಕೆ ಯಾವುದೇ ರೀತಿಯ ಸಮರ್ಥನೆ ಇಲ್ಲ. ಧಾರ್ಮಿಕ ಬಣ್ಣ ಬಳಿಯುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಹಾಗೂ ಸೇನಾ ಪಡೆ ಹಾಗೂ ಗಡಿ ಭದ್ರತಾ ಪಡೆ ಅತ್ಯಂತ ದಕ್ಷ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅಮರೀಂದರ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಇದುವರೆಗೆ 17 ಸಂಚು ವಿಫಲಗೊಳಿಸಿದ್ದು, 81 ಮಂದಿಯನ್ನು ಬಂಧಿಸಲಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಸ್ಫೋಟಕ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಮರೀಂದರ್ ಸಿಂಗ್‌ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ