ಅಮರಾವತಿ: ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಪೆಥಾಯ್ ಚಂಡಮಾರುತದ ಅಬ್ಬರ ಜಾರಾಗಿದ್ದು, ಮಳೆ ಸಂಬಂಧಿತ ಅವಘಡದಲ್ಲಿ ಆಂಧ್ರದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಕತ್ರೇನಿಕೋನದಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಂಡಮಾರುತ ಅಪ್ಪಳಿಸಿದ್ದು, ರಾಜ್ಯದಲ್ಲಿ ಭಾರಿ ಬಿರುಗಾಳಿ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ನೂರಾರು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. 20,000ಕ್ಕೂ ಹೆಚ್ಚು ಜನರನ್ನು ಸಂತ್ರಸ್ತರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ವಿಜಯವಾಡದಲ್ಲಿ ಭಾರಿ ಮಳೆಯಿಂದ ಗುಡ್ಡ ಕುಸಿದು ದುರ್ಗಾ ರಾವ್ (28) ಎಂಬ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ವಿದ್ಯುತ್ ಸಂಪರ್ಕ ಕಡಿಗತೊಂಡಿದ್ದು, ಹಲವೆಡೆ ಮೊಬೈಲ್ ಸಂಪರ್ಕ ಹಾಗೂ ರಸ್ತೆ ಸಂಚಾರವೂ ಕಡಿತಗೊಂಡಿದೆ. ಪಶ್ಚಿಮ ಬಂಗಾಳಕ್ಕೂ ಚಂಡಮಾರುತದ ಪ್ರಭಾವ ತಟ್ಟಲಿದ್ದು, ಮಂಗಳವಾರ ರಾಜ್ಯದ ತೀರ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಒಡಿಶಾದಲ್ಲಿ ಈಗಾಗಲೇ ಸೈಕ್ಲೋನ್ ಪ್ರಭಾವ ಕಾಣಿಸಿಕೊಂಡಿದ್ದು, ಭಾನುವಾರದಿಂದಲೇ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ.
ಆಂಧ್ರದಲ್ಲಿ ಪೆಥಾಯ್ ಚಂಡಮಾರುತದ ಆರ್ಭಟ, ಭಾರಿ ಮಳೆಗೆ ಒಂದು ಬಲಿ
ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಕತ್ರೇನಿಕೋನದಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಂಡಮಾರುತ ಅಪ್ಪಳಿಸಿದ್ದು, ರಾಜ್ಯದಲ್ಲಿ ಭಾರಿ ಬಿರುಗಾಳಿ ಮಳೆಗೆ ಅವಾಂತರ ಸೃಷ್ಟಿಯಾಗಿದೆ
Vijaya Karnataka 18 Dec 2018, 5:00 am