ಆ್ಯಪ್ನಗರ

ಮಹಾಮೈತ್ರಿ ಕಸರತ್ತಿಗೆ ಇಂದು ಸಭೆ

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಒಗ್ಗಟ್ಟಿನ ಹೋರಾಟ ನಡೆಸುವುದು ಈ ಪಕ್ಷಗಳ ಇಂಗಿತವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಒಂದು ದಿನ ಮೊದಲು ಈ ಸಭೆ ನಡೆಯಲಿದ್ದು, ವಿಶೇಷ ಮಹತ್ವ ಪಡೆದಿದೆ. ಬಿಜೆಪಿ ವಿರೋಧಿ ಮಹಾಮೈತ್ರಿ ಕೂಟ ರಚಿಸುವ ಕಸರತ್ತನ್ನು ಚುರುಕುಗೊಳಿಸಿರುವ ಪ್ರತಿಪಕ್ಷಗಳ ಮುಖಂಡರು ಸೋಮವಾರ ಇಲ್ಲಿ ಸಭೆ ಸೇರಿ ಮುಂದಿನ ಹಂತದ ತಯಾರಿ ಕುರಿತು ಚರ್ಚೆ ನಡೆಸಲಿದ್ದಾರೆ.

Vijaya Karnataka 10 Dec 2018, 9:35 am
ಹೊಸದಿಲ್ಲಿ: ಬಿಜೆಪಿ ವಿರೋಧಿ ಮಹಾಮೈತ್ರಿ ಕೂಟ ರಚಿಸುವ ಕಸರತ್ತನ್ನು ಚುರುಕುಗೊಳಿಸಿರುವ ಪ್ರತಿಪಕ್ಷಗಳ ಮುಖಂಡರು ಸೋಮವಾರ ಇಲ್ಲಿ ಸಭೆ ಸೇರಿ ಮುಂದಿನ ಹಂತದ ತಯಾರಿ ಕುರಿತು ಚರ್ಚೆ ನಡೆಸಲಿದ್ದಾರೆ.
Vijaya Karnataka Web naidu.


2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಒಗ್ಗಟ್ಟಿನ ಹೋರಾಟ ನಡೆಸುವುದು ಈ ಪಕ್ಷಗಳ ಇಂಗಿತವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಒಂದು ದಿನ ಮೊದಲು ಈ ಸಭೆ ನಡೆಯಲಿದ್ದು, ವಿಶೇಷ ಮಹತ್ವ ಪಡೆದಿದೆ.
ಟಿಡಿಪಿ ಮುಖ್ಯಸ್ಥ ರಾಗಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಸಭೆಯ ಉಸ್ತುವಾರಿ ವಹಿಸಿದ್ದು, ಬಿಜೆಪಿ ಹೊರತಾದ ಎಲ್ಲ ಪಕ್ಷಗಳ ಮುಖಂಡರಿಗೆ ಆಹ್ವಾನ ನೀಡಲಾಗಿದೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ನಾಯ್ಡು ಅವರು ಭಾನುವಾರವೇ ದಿಲ್ಲಿ ತಲುಪಿದ್ದು, ಅರವಿಂದ ಕೇಜ್ರಿವಾಲ್‌ ಸೇರಿದಂತೆ ಕೆಲವು ನಾಯಕರನ್ನು ಭೇಟಿ ಮಾಡಿದ್ದಾರೆ.
''ಮಹಾಮೈತ್ರಿ ಕೂಟದ ಮುಂದಿನ ರೂಪುರೇಷೆಗಳ ಕುರಿತು ಚರ್ಚಿಸುವುದು ಈ ಸಭೆಯ ಪ್ರಮುಖ ಅಜೆಂಡಾ. ಸಂಸತ್‌ ಅಧಿವೇಶನದಲ್ಲಿ ಸರಕಾರದ ವಿರುದ್ಧ ನಡೆಸಬೇಕಾದ ಜಂಟಿ ಹೋರಾಟ ತಂತ್ರಗಳೂ ಪ್ರಸ್ತಾಪಗೊಳ್ಳಲಿವೆ,'' ಎಂದು ಮೂಲಗಳು ತಿಳಿಸಿವೆ.

2019ರ ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಯಾರೊಂದಿಗೂ ಕೈಜೋಡಿಸುವುದಿಲ್ಲ. ಪ್ರತಿಪಕ್ಷಗಳ ಮಹಾಘಟಬಂಧನದ ಜತೆಗೂ ಹೊಂದಾಣಿಕೆ ಇಲ್ಲ. ನಮಗೆ ಅಧಿಕಾರ ಮುಖ್ಯವಲ್ಲ. ಅಧಿಕಾರದ ದರ್ಪ ಮೆರೆಯುವವರಿಗೆ ಪಾಠ ಕಲಿಸುವುದು ನಮ್ಮ ಗುರಿ-ಯೋಗೇಂದ್ರ ಯಾದವ್‌, ಸ್ವರಾಜ್‌ ಇಂಡಿಯಾ ಪಕ್ಷದ ಅಧ್ಯಕ್ಷ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ