ಆ್ಯಪ್ನಗರ

ಮೋದಿ ಸರಕಾರದ ವಿರುದ್ಧ ದನಿ ಎತ್ತಿದ ಪ್ರತಿಪಕ್ಷಗಳು, ಹೋರಾಟ ನಡೆಸಲು ಸಂಕಲ್ಪ

ಪಂಜಾಬ್‌ನಲ್ಲಿ ಕೊರೊನಾದಿಂದ 25 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ. ಈ ಬಗ್ಗೆ ಮನವಿ ಸಲ್ಲಿಸಿದ್ದರೂ ಕೇಂದ್ರ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ತಿಳಿಸಿದ್ದಾರೆ.

Vijaya Karnataka Web 26 Aug 2020, 8:05 pm
ಹೊಸದಿಲ್ಲಿ: ಕೇಂದ್ರ ಸರಕಾರದ ವಿರುದ್ಧ ಗುಡುಗಿರುವ ಪ್ರತಿಪಕ್ಷಗಳು ಈಗ ಒಟ್ಟಾಗಿ ಹೋರಾಟ ನಡೆಸಲು ಸಂಕಲ್ಪ ಮಾಡಿವೆ.
Vijaya Karnataka Web ಆನ್‌ಲೈನ್‌ ಸಭೆ
ಆನ್‌ಲೈನ್‌ ಸಭೆ


ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆಸಿದ ಪ್ರತಿಪಕ್ಷಗಳ ನಾಯಕರು ಮೋದಿ ಸರಕಾರದ ವಿರುದ್ಧ ಯಾವ ರೀತಿ ಹೋರಾಟ ನಡೆಸಬೇಕು ಎಂದು ರೂಪುರೇಷೆ ಸಿದ್ಧಪಡಿಸಿವೆ.

ಜೆಇಇ, ನೀಟ್‌ ಮುದೂಡಿಕೆ ಬೇಡಿಕೆಗೆ ಸರಕಾರ ಮನವಿಗೆ ಸ್ಪಂದಿಸದಿರುವುದು, ಜಿಎಸ್‌ಟಿ ಬಾಕಿ ವಿಚಾರದಲ್ಲಿ ಮೀನಮೇ ಇರುವುದು ಸೇರಿದಂತೆ ಹಲವರು ವಿಷಯಗಳಲ್ಲಿ ಕೇಂದ್ರ ಸರಕಾರ ಕಣ್ಣಿದ್ದರೂ ಕುರುಡಾಗಿದೆ. ಕಿವಿ ಇದ್ದರೂ ಕಿವುಡಾಗಿದೆ ಎಂದು ಪ್ರತಿಪಕ್ಷಗಳು ಅಬ್ಬರಿಸಿವೆ.

ಆನ್‌ಲೈನ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಂದ್ರ ಸರಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಡಬೇಕು. ಜನಜಾಗೃತಿ ಮೂಡಿಸಬೇಕು ಎಂದು ಹೇಳಿದ್ದಾರೆ.

ಆನ್‌ಲೈನ್‌ ಸಭೆಯಲ್ಲಿ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ನಾವು ಕೇಂದ್ರ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಬೇಕಾಗಿದೆ. ಕೇಂದ್ರದ ವಿರುದ್ಧ ಹೋರಾಟ ನಡೆಸಬೇಕಾದ ಸಮಯ ಬಂದಿದೆ ಎಂದು ತಿಳಿಸಿದರು.

ಪಂಜಾಬ್‌ನಲ್ಲಿ ಕೊರೊನಾದಿಂದ 25 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ. ಈ ಬಗ್ಗೆ ಮನವಿ ಸಲ್ಲಿಸಿದ್ದರೂ ಕೇಂದ್ರ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ತಿಳಿಸಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಮತ್ತು ಕಾಂಗ್ರೆಸ್‌ನ ನಾಲ್ವರು ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ