ನಮ್ಮ ಹೆಣ್ಣು ಮಕ್ಕಳಿಗೆ ನ್ಯಾಯ ಸಿಗುತ್ತದೆ, ತಪ್ಪಿತಸ್ಥರನ್ನು ಬಿಡುವುದಿಲ್ಲ: ಮೋದಿ
ಹೊಸದಿಲ್ಲಿಯಲ್ಲಿ ಪ್ರಧಾನಮಂತ್ರಿ ಘರ್ಜನೆ
Vijaya Karnataka Web 13 Apr 2018, 8:57 pm
ಹೊಸದಿಲ್ಲಿ: ಉನ್ನಾವ್ ಮತ್ತು ಕಥುವಾ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ತುಟಿ ಬಿಚ್ಚಿರುವ ಪ್ರಧಾನಿ ಮೋದಿ, ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರು ಯಾರೇ ಆಗಲಿ ಬಿಡುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘರ್ಜಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಉದ್ಘಾಟನೆ ಮಾಡಿದ ನಂತರ ಭಾಷಣ ಮಾಡಿದರು.
ಕಳೆದ ಕೆಲವು ದಿನಗಳಿಂದ ನಡೆದ ಇಂಥ ಪ್ರಕರಣಗಳು ನಾಗರಿಕ ಸಮಾಜ ಒಪ್ಪುವಂಥದ್ದು ಅಲ್ಲ. ಇಂಥ ಪ್ರಕರಣಗಳು ನಿಜಕ್ಕೂ ಹೇಸಿಗೆ, ಅಸಹ್ಯ ಹುಟ್ಟಿಸುತ್ತದೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಇಡೀ ದೇಶಕ್ಕೆ ಈ ಮೂಲಕ ಭರವಸೆ ನೀಡುತ್ತೇನೆ ಎಂದು ಮೋದಿ ತಿಳಿಸಿದರು.
ಹೆಣ್ಣು ಮಗಳೊಬ್ಬಳು ಮನೆಗೆ ತಡವಾಗಿ ಬಂದರೆ ಎಲ್ಲಿಗೆ ಹೋಗಿದೆ ಎಂದು ಕೇಳುತ್ತೇವೆ. ಮಗ ತಡರಾತ್ರಿ ಬಂದರೂ ಇದೇ ಪ್ರಶ್ನೆಯನ್ನು ಕೇಳಬೇಕು ಎಂದರು.
ನಮ್ಮ ಕೌಟುಂಬಿಕ ವ್ಯವಸ್ಥೆಯನ್ನು ನಾವು ಗಟ್ಟಿ ಮಾಡಿಕೊಳ್ಳಬೇಕು. ಸಾಮಾಜಿಕ ಮೌಲ್ಯಗಳು ಸದಾ ಉಳಿಯುವಂತಾಗಬೇಕು ಎಂದು ಮೋದಿ ಕರೆ ನೀಡಿದರು.
ಹೊಸದಿಲ್ಲಿಯಲ್ಲಿ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಉದ್ಘಾಟನೆ ಮಾಡಿದ ನಂತರ ಭಾಷಣ ಮಾಡಿದರು.
ಕಳೆದ ಕೆಲವು ದಿನಗಳಿಂದ ನಡೆದ ಇಂಥ ಪ್ರಕರಣಗಳು ನಾಗರಿಕ ಸಮಾಜ ಒಪ್ಪುವಂಥದ್ದು ಅಲ್ಲ. ಇಂಥ ಪ್ರಕರಣಗಳು ನಿಜಕ್ಕೂ ಹೇಸಿಗೆ, ಅಸಹ್ಯ ಹುಟ್ಟಿಸುತ್ತದೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಇಡೀ ದೇಶಕ್ಕೆ ಈ ಮೂಲಕ ಭರವಸೆ ನೀಡುತ್ತೇನೆ ಎಂದು ಮೋದಿ ತಿಳಿಸಿದರು.
ಹೆಣ್ಣು ಮಗಳೊಬ್ಬಳು ಮನೆಗೆ ತಡವಾಗಿ ಬಂದರೆ ಎಲ್ಲಿಗೆ ಹೋಗಿದೆ ಎಂದು ಕೇಳುತ್ತೇವೆ. ಮಗ ತಡರಾತ್ರಿ ಬಂದರೂ ಇದೇ ಪ್ರಶ್ನೆಯನ್ನು ಕೇಳಬೇಕು ಎಂದರು.
ನಮ್ಮ ಕೌಟುಂಬಿಕ ವ್ಯವಸ್ಥೆಯನ್ನು ನಾವು ಗಟ್ಟಿ ಮಾಡಿಕೊಳ್ಳಬೇಕು. ಸಾಮಾಜಿಕ ಮೌಲ್ಯಗಳು ಸದಾ ಉಳಿಯುವಂತಾಗಬೇಕು ಎಂದು ಮೋದಿ ಕರೆ ನೀಡಿದರು.