ಆ್ಯಪ್ನಗರ

ಅತ್ಯಾಚಾರ ಎಸಗುವವರನ್ನು ಸಾರ್ವಜನಿಕವಾಗಿ ಥಳಿಸಿ: ರಾಜಕೀಯ ನಾಯಕರ ಆಗ್ರಹ

ಹೈದರಾಬಾದ್‌ನಲ್ಲಿ ನಡೆದ ಪಶುವೈದ್ಯಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಈಗ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅತ್ಯಾಚಾರ ಆರೋಪಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

Vijaya Karnataka Web 2 Dec 2019, 7:29 pm
ಹೊಸದಿಲ್ಲಿ: ಹೈದರಾಬಾದ್‌ನ ಪಶುವೈದ್ಯಯ ಅತ್ಯಾಚಾರ, ಕೊಲೆ ಪ್ರಕರಣ ಕುರಿತು ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ನಾಯಕರು ಕೂಡ ಈಗ ಕೆಂಡ ಕಾರಿದ್ದಾರೆ.
Vijaya Karnataka Web ಜಯಾ ಬಚ್ಚನ್‌
ಜಯಾ ಬಚ್ಚನ್‌


ಸಂಸತ್ತಿನ ಕಲಾಪದಲ್ಲಿಯೂ ಈ ವಿಷಯ ಪ್ರಸ್ತಾಪವಾಗಿದೆ.

ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಈ ಕುರಿತು ಕೃತ್ಯ ಎಸಗುವವರನ್ನು ಸಾರ್ವಜನಿಕವಾಗಿ ಥಳಿಸಬೇಕು ಎಂದು ಸಮಾಜವಾದಿ ಪಕ್ಷದ ಸಂಸದೆ ಜಯಾಬಚ್ಚನ್‌ ಆಗ್ರಹಿಸಿದ್ದಾರೆ.

ಜಯಾಬಚ್ಚನ್‌ ಹೇಳಿಕೆ ಈಗ ವಿವಾದವನ್ನೂ ಸೃಷ್ಟಿಸಿದೆ.

ಜಯಾಬಚ್ಚನ್‌ ಮಾತ್ರವಲ್ಲ ಇನ್ನೂ ಕೆಲವು ರಾಜಕೀಯ ಮುಖಂಡರು ಇದೇ ರೀತಿಯ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ರಾಜಕೀಯ ನಾಯಕರಾಗಿ, ಸಂಸದರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಹಲವಾರು ಮಂದಿ ಆಕ್ಷೇಪಿಸಿದ್ದಾರೆ.

ಹೈದರಾಬಾದ್‌ನಲ್ಲಿ ಕಳೆದ ವಾರ 26 ವರ್ಷದ ಪಶುವೈದ್ಯೆಯೊಬ್ಬರ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿ ಭೀಕರವಾಗಿ ಕೊಲೆ ಎಸಗಿದ್ದಾರೆ.

ಮಹಿಳೆಯ ವಾಹನದ ಟೈರ್‌ ಪಂಕ್ಚರ್‌ ಆಗಿದ್ದಾಗ ಸಹಾಯ ಮಾಡುವ ನೆಪದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಈ ಸಂಘಟನೆ ಸಂಬಂಧ ನಾಲ್ವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ