ಆ್ಯಪ್ನಗರ

​ಪದ್ಮಾವತ್‌ ಚಿತ್ರ ಬಿಡುಗಡೆ ಬೆನ್ನಲ್ಲೇ ಪ್ರತಿಭಟನೆ: ಹಲವೆಡೆ ಭಾರಿ ಹಿಂಸಾಚಾರ

​ಹಲವು ಭಾಗಗಳಲ್ಲಿ ಕಲ್ಲು ತೂರಾಟ, ರಸ್ತೆಯಲ್ಲಿ ಬೆಂಕಿ

Vijaya Karnataka Web 24 Jan 2018, 6:29 pm
ಹೊಸದಿಲ್ಲಿ: ಭಾರಿ ವಿವಾದಕ್ಕೆ ಕಾರಣವಾಗಿರುವ 'ಪದ್ಮಾವತ್' ಚಿತ್ರ ಬಿಡುಗಡೆ ಬೆನ್ನಲ್ಲೇ ಹಲವು ಕಡೆ ಭಾರಿ ಪ್ರತಿಭಟನೆ, ಹಿಂಸಾಚಾರ ನಡೆದಿರುವ ವರದಿಯಗಳಾಗಿವೆ.
Vijaya Karnataka Web Padmavat Image


ಕಳೆದ 24 ಗಂಟೆಗಳಿಂದ ಅಹಮದಾಬಾದ್ನಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಹಿನ್ನೆಲೆಯಲ್ಲಿ 48 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈಗಾಗಲೇ ಕೆಲವು ಕಡೆ ಪದ್ಮಾವತ್ ಚಿತ್ರ ಬಿಡುಗಡೆಯಾಗಿದೆ.

ಮಂಗಳವಾರ ರಾತ್ರಿಯಿಂದಲೇ ಚಿತ್ರ ಬಿಡುಗಡೆಗೆ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆ ನಡೆಸಲಾಗಿದೆ. ಭಾರಿ ಸಂಖ್ಯೆಯ ಪ್ರತಿಭಟನಾಕಾರರು ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದುವರೆಗೆ 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ.

ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಅಹಮದಾಬಾದ್ ಹಾಗೂ ಗುಜರಾತ್ನ ಪ್ರಮುಖ ನಗರಗಳ ಚಿತ್ರಮಂದಿರಗಳಿಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಆದರೆ ಸೂಕ್ತ ನಿರ್ಧಾರ ಕೈಗೊಳ್ಳುವವರೆಗೂ ಚಿತ್ರ ಪ್ರದರ್ಶನ ಮಾಡದಿರಲು ಚಿತ್ರಮಂದಿರದ ಮಾಲೀಕರು ನಿರ್ಧರಿಸಿದ್ದಾರೆ.


ಮುಂಬೈನಲ್ಲಿಯೂ ರಜಪೂತ್ ಕರ್ಣಿ ಸೇನಾದ 35 ಕಾರ್ಯಕರ್ತರು ಚಿತ್ರ ಬಿಡುಗಡೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ದೀಪಿಕಾ ಪಡುಕೋಣೆ ನಟಿಸಿರುವ ಪದ್ಮಾವತ್ ಚಿತ್ರ ಭಾರಿ ವಿವಾದ ಸೃಷ್ಟಿಸಿದೆ.

ಮೀರತ್, ಆಗ್ರಾ, ಇಂದೋರ್, ಗುರುಗ್ರಾಮ್ನಲ್ಲಿ ಪ್ರತಿಭಟನಾಕಾರರು ಮಾಲ್ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಕರ್ಣಿಸೇನಾದ ಚಿತ್ತೋಢಗಢ ಘಟಕದ ಮುಖ್ಯಸ್ಥನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ