ಆ್ಯಪ್ನಗರ

ಜಾಧವ್ ಮರಣದಂಡನೆ ವಿಷಯದಲ್ಲಿ ರಾಜಿ ಇಲ್ಲ: ಪಾಕ್ ಸೇನೆ

ಕುಲಭೂಷಣ್ ಜಾಧವ್ ಮರಣದಂಡನೆ ವಿಚಾರದಲ್ಲಿ ರಾಜಿ ಸಂಧಾನ ಮಾಡಿಕೊಳ್ಳದಿರಲು ಪಾಕಿಸ್ತಾನ ಸೇನೆಯ ಉನ್ನತ ಅಧಿಕಾರಿಗಳು ನಿರ್ಣಯ ಕೈಗೊಂಡಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 14 Apr 2017, 1:45 pm
ಇಸ್ಲಾಮಾಬಾದ್: ಭಾರತೀಯ ನೌಕಾಪಡೆಯ ನಿವೃತ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಮರಣದಂಡನೆ ವಿಚಾರದಲ್ಲಿ ಯಾವುದೇ ರಾಜಿ ಸಂಧಾನ ಮಾಡಿಕೊಳ್ಳದಿರಲು ಪಾಕಿಸ್ತಾನ ಸೇನೆಯ ಉನ್ನತ ಅಧಿಕಾರಿಗಳು ನಿರ್ಣಯ ಕೈಗೊಂಡಿದ್ದಾರೆ.
Vijaya Karnataka Web pak army brass discusses kulbhushan jadhav case rules out compromise
ಜಾಧವ್ ಮರಣದಂಡನೆ ವಿಷಯದಲ್ಲಿ ರಾಜಿ ಇಲ್ಲ: ಪಾಕ್ ಸೇನೆ


ಇದೇ ವೇಳೆ ಪಾಕಿಸ್ತಾನದ ನಿವೃತ ಸೇನಾಧಿಕಾರಿಯೊಬ್ಬರು ನೇಪಾಳ ಗಡಿಯಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿಕೊಂಡಿದೆ.

ಜಾಧವ್ ಅವರಿಗೆ ಮರಣ ದಂಡನೆ ಜಾರಿಗೊಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಭಾರತ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಸೇನೆ ಈ ನಿರ್ಣಯ ಕೈಗೊಂಡಿದೆ.

'ರಾವಲ್ಪಿಂಡಿಯಲ್ಲಿರುವ ಸೇನಾ ಪ್ರಧಾನ ಕಚೇರಿಯಲ್ಲಿ ಸೇನಾ ಮುಖ್ಯಸ್ಥ ನರಲ್ ಕಮರ್ ಜಾವೇದ್ ಬಾಜ್ವಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ' ಎಂದು ಪಾಕಿಸ್ತಾನ ಸೇನೆಯ ಸಾರ್ವಜನಿಕ ಸಂಪರ್ಕ ವಿಭಾಗ (ಐಎಸ್‌ಪಿಆರ್) ಮಾಹಿತಿ ನೀಡಿದೆ.

ಕುಲಭೂಷನ್ ಜಾಧವ್ ಅವರಿಗೆ ಪಾಕಿಸ್ತಾನ ಸೇನಾ ನ್ಯಾಯಾಲಯ ವಿ ಮಂಗಳವಾರ ಮರಣದಂಡನೆ ವಿಧಿಸಿತ್ತು. ಪಾಕಿಸ್ತಾನ ಮರಣದಂಡನೆ ಜಾರಿ ಮಾಡಿದ್ದಲ್ಲಿ ಅದನ್ನು ಪೂರ್ವ ನಿರ್ಧರಿತ ಕೊಲೆ ಎಂದು ಪರಿಗಣಿಸಲಾಗುತ್ತೆ. ಇದರಿಂದ ಉಭಯ ದೇಶಗಳ ಬಾಂಧವ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಭಾರತ ಎಚ್ಚರಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ