ಆ್ಯಪ್ನಗರ

ಪೂಂಚ್‌, ರಜೌರಿ ಗಡಿ ನಿವಾಸಿಗಳಿಗೆ 400 ಹೆಚ್ಚುವರಿ ಬಂಕರ್‌ ನಿರ್ಮಾಣ

ಈ ಬಂಕರ್‌ಗಳ ನಿರ್ಮಾಣವನ್ನು ಶೀಘ್ರವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದ್ದು, ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಈ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. 'ನಿರ್ದಿಷ್ಟ ಮಾನದಂಡಗಳಿಗೆ ಅನುಗುಣವಾಗಿ ಒಂದು ತಿಂಗಳೊಳಗಾಗಿ ಬಂಕರ್‌ಗಳ ನಿರ್ಮಾಣ ಪೂರ್ಣಗೊಳ್ಳಲಿದೆ' ಎಂದು ವಕ್ತಾರರು ತಿಳಿಸಿದರು.

Vijaya Karnataka Web 2 Mar 2019, 7:00 pm
ಜಮ್ಮು: ಕಳೆದ 5 ದಿನಗಳಿಂದ ಪಾಕ್‌ ಸೇನೆಯ ತೀವ್ರ ಶೆಲ್‌ ದಾಳಿಗೆ ಗುರಿಯಾಗಿರುವ ಪೂಂಚ್‌ ಮತ್ತು ರಜೌರಿ ಜಿಲ್ಲೆಯ ನಿಯಂತ್ರಣ ರೇಖೆ ಬಳಿ 400 ಹೆಚ್ಚುವರಿ ವೈಯಕ್ತಿಕ ಬಂಕರ್‌ಗಳ ನಿರ್ಮಾಣಕ್ಕೆ ಜಮ್ಮು ಮತ್ತು ಕಾಶ್ಮೀರದ ಆಡಳಿತ ಮಂಜೂರಾತಿ ನೀಡಿದೆ.
Vijaya Karnataka Web Bunkers


'ಗಡಿಯಾಚೆಯಿಂದ ತೀವ್ರ ಶೆಲ್‌ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿ 200 ವೈಯಕ್ತಿಕ ಬಂಕರ್‌ಗಳ ನಿರ್ಮಾಣಕ್ಕೆ ಸರಕಾರ ಮಂಜೂರಾತಿ ನೀಡಿದೆ' ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಈ ಬಂಕರ್‌ಗಳ ನಿರ್ಮಾಣವನ್ನು ಶೀಘ್ರವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದ್ದು, ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಈ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

'ನಿರ್ದಿಷ್ಟ ಮಾನದಂಡಗಳಿಗೆ ಅನುಗುಣವಾಗಿ ಒಂದು ತಿಂಗಳೊಳಗಾಗಿ ಬಂಕರ್‌ಗಳ ನಿರ್ಮಾಣ ಪೂರ್ಣಗೊಳ್ಳಲಿದೆ' ಎಂದು ವಕ್ತಾರರು ತಿಳಿಸಿದರು.

ಗಡಿಯಾಚೆಗಿನ ಭಯೋತ್ಪಾದನೆಯಿಂದ ಜನತೆ ರಕ್ಷಣೆ ಪಡೆಯಲು ಬಂಕರ್‌ಗಳು ಸುರಕ್ಷಿತ ತಾಣಗಳಾಗಿದ್ದು, ಶೆಲ್‌ ದಾಳಿ ವೇಳೆ ರಕ್ಷಣೆ ಪಡೆಯಲು ಸುಲಭವಾಗುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.

ಗಡಿ ಭಾಗದ ನಿವಾಸಿಗಳಿಗೆ ಸುರಕ್ಷಿತ ಕಾಲನಿಗಳನ್ನು ನಿರ್ಮಿಸಬೇಕು ಎಂದು ಪ್ರಮುಖ ಗುಜ್ಜರ್ ನಾಯಕ ಶಂಶೀರ್ ಹಕ್ಲಾ ಪೂಂಚಿ ಒತ್ತಾಯಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಪಾಕ್ ಶೆಲ್ ದಾಳಿಗೆ ನಾಲ್ವರು ನಾಗರಿಕರು ಮೃತಪಟ್ಟಿರುವ ಬಗ್ಗೆ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ನಾಗರಿಕ ಪ್ರದೇಶಗಳ ಮೇಲೆ ಪಾಕ್ ಪಡೆಗಳು ನಡೆಸುತ್ತಿರುವ ಶೆಲ್ ದಾಳಿಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.

ನಿಯಂತ್ರಣ ರೇಖೆ ಬಳಿ ವಾಸಿಸುವ ಗ್ರಾಮಸ್ಥರಿಗೆ ಯಾವುದೇ ಮೂಲಸೌಕರ್ಯಗಳಿಲ್ಲ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದಿದ್ದಾರೆ. ವಿದ್ಯುತ್, ವೈದ್ಯಕೀಯ ಸೌಲಭ್ಯ, ಕುಡಿಯುವ ನೀರಿನ ಸೌಲಭ್ಯದಿಂದಲೂ ವಂಚಿತರಾಗಿದ್ದಾರೆ. ಅವರ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಪ್ಯಾಕೇಜ್ ಪ್ರಕಟಿಸಬೇಕು ಎಂದು ಪೂಂಚಿ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ