ಆ್ಯಪ್ನಗರ

ಯುದ್ಧ ಸನ್ನದ್ಧವಾಗಿದೆಯೇ ಪಾಕ್‌?: ಲಡಾಕ್‌ ಬಳಿಯ ಸ್ಕರ್ಡು ವಾಯುನೆಲೆಗೆ ವಿಮಾನಗಳ ರವಾನೆ

ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವ ಭಾರತದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಪಾಕಿಸ್ತಾನ ಕುತಂತ್ರ ಮಾಡುತ್ತಿದೆ. ಅಲ್ಲದೇ ಜಮ್ಮು ಕಾಶ್ಮೀರದ ಜನರನ್ನು ಪ್ರಚೋದನೆ ಮಾಡುವ ಕೆಲಸಕ್ಕೂ ಕೈ ಹಾಕಿದೆ.

Vijaya Karnataka Web 12 Aug 2019, 4:20 pm
ಹೊಸದಿಲ್ಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದು ಮಾಡಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಶೀತಲ ಸಮರ ಮುಂದುವರಿದಿದೆ.
Vijaya Karnataka Web ಯುದ್ಧ ವಿಮಾನ
ಯುದ್ಧ ವಿಮಾನ


ಇದರ ಬೆನ್ನಲ್ಲೇ ಪಾಕಿಸ್ತಾನ ಮತ್ತೆ ಕ್ಯಾತೆ ತೆಗೆಯುತ್ತಿದೆ. ಕಾಶ್ಮೀರವನ್ನು ಇಬ್ಭಾಗ ಮಾಡಿ ಲಡಾಕ್‌ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಲಾಗಿದೆ.

ಈಗ ಲಡಾಕ್‌ ಬಳಿ ಪಾಕಿಸ್ತಾನ ತನ್ನ ಯುದ್ಧ ವಿಮಾನಗಳನ್ನು ಸಾಗಿಸುತ್ತಿದೆ.

ಲಡಾಕ್‌ ಬಳಿಯ ಪಾಕಿಸ್ತಾನದ ಸ್ಕರ್ಡು ವಾಯುನೆಲೆಗೆ ಪಾಕಿಸ್ತಾನದ ಮೂರು ಸಿ-130 ಟ್ರಾನ್ಸ್‌ಪೋರ್ಟ್‌ ವಿಮಾನಗಳನ್ನು ಕಳುಹಿಸಿಕೊಡಲಾಗಿದೆ. ಇದರ ಬೆನ್ನಲ್ಲೇ ಯುದ್ಧ ವಿಮಾನಗಳನ್ನು ವಾಯುನೆಲೆಯಲ್ಲಿ ಬೀಡು ಬಿಡಲಾಗಿದೆ.

ಪಾಕಿಸ್ತಾನದ ಈ ನಡೆಯನ್ನು ಭಾರತ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈಗಾಗಲೇ ಸ್ಕರ್ಡು ವಾಯುನೆಲೆಯಲ್ಲಿ ಬೀಡುಬಿಟ್ಟಿರುವ ಯುದ್ಧ ವಿಮಾನಗಳ ಕಾರ್ಯಾಚರಣೆಗೆ ಅಗತ್ಯ ಸಾಧನಗಳನ್ನು ಒದಗಿಸಲು ಪಾಕಿಸ್ತಾನ ಮುಂದಾಗಿದೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ಪಾಕಿಸ್ತಾನ ಕಾರ್ಯಾಚರಣೆ ನಡೆಸಲು ಈ ರೀತಿಯ ನಿರ್ಧಾರ ಕೈಗೊಂಡಿದೆ.

ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವ ಭಾರತದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಪಾಕಿಸ್ತಾನ ಕುತಂತ್ರ ಮಾಡುತ್ತಿದೆ. ಇದರ ಬೆನ್ನಲ್ಲೇ ಈಗ ಯುದ್ಧ ಸನ್ನದ್ಧ ಮಾದರಿಯಲ್ಲಿ ಯುದ್ಧ ವಿಮಾನಗಳನ್ನು ಲಡಾಕ್‌ ಸಮೀಪದ ವಾಯುನೆಲೆಗೆ ರವಾನಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ