ಹೊಸದಿಲ್ಲಿ: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಪಡೆಗಳು ಶೆಲ್ದಾಳಿ ನಡೆಸುವ ಮೂಲಕ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿವೆ.
ನೌಶೆರಾ ವಲಯದಲ್ಲಿ ಪಾಕಿಸ್ತಾನ ಪಡೆಗಳು ಮೋರ್ಟಾರ್ ಮತ್ತು ಸಣ್ಣ ಶಸ್ತ್ರಾಸ್ತ್ರಗಳ ಮೂಲಕ ದಾಳಿ ನಡೆಸಿವೆ ಎಂದು ರಕ್ಷಣ ಇಲಾಖೆ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.
ಭಾರತೀಯ ಪಡೆಗಳು ಕೂಡ ಪರಿಣಾಮಕಾರಿ ಪ್ರತಿ ದಾಳಿ ನಡೆಸಿವೆ. ಬೆಳಿಗ್ಗೆ 9 ಗಂಟೆಗೆ ದಾಳಿ ಆರಂಭಗೊಂಡಿದ್ದು, ಈಗಲೂ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.
ಪೂಂಛ್ ಜಿಲ್ಲೆಯ ಮಾನ್ಕೋಟೆ ಮತ್ತು ಕೃಷ್ಣಘಾಟಿ ವಲಯದಲ್ಲಿ ಪಾಕಿಸ್ತಾನ ಸೇನೆ ನಿನ್ನೆ ನಡೆಸಿದ ದಾಳಿಯಲ್ಲಿ ಓರ್ವ ನಾಗರಿಕ ಗಾಯಗೊಂಡಿದ್ದ.
ನಾಗರಿಕರು ಹಾಗೂ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಪಡೆಗಳು ನಿರಂತರ ಗುಂಡಿನ ದಾಳಿ ನಡೆಸಿದ್ದವು.
ನೌಶೆರಾ ವಲಯದಲ್ಲಿ ಪಾಕಿಸ್ತಾನ ಪಡೆಗಳು ಮೋರ್ಟಾರ್ ಮತ್ತು ಸಣ್ಣ ಶಸ್ತ್ರಾಸ್ತ್ರಗಳ ಮೂಲಕ ದಾಳಿ ನಡೆಸಿವೆ ಎಂದು ರಕ್ಷಣ ಇಲಾಖೆ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.
ಭಾರತೀಯ ಪಡೆಗಳು ಕೂಡ ಪರಿಣಾಮಕಾರಿ ಪ್ರತಿ ದಾಳಿ ನಡೆಸಿವೆ. ಬೆಳಿಗ್ಗೆ 9 ಗಂಟೆಗೆ ದಾಳಿ ಆರಂಭಗೊಂಡಿದ್ದು, ಈಗಲೂ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.
ಪೂಂಛ್ ಜಿಲ್ಲೆಯ ಮಾನ್ಕೋಟೆ ಮತ್ತು ಕೃಷ್ಣಘಾಟಿ ವಲಯದಲ್ಲಿ ಪಾಕಿಸ್ತಾನ ಸೇನೆ ನಿನ್ನೆ ನಡೆಸಿದ ದಾಳಿಯಲ್ಲಿ ಓರ್ವ ನಾಗರಿಕ ಗಾಯಗೊಂಡಿದ್ದ.
ನಾಗರಿಕರು ಹಾಗೂ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಪಡೆಗಳು ನಿರಂತರ ಗುಂಡಿನ ದಾಳಿ ನಡೆಸಿದ್ದವು.