ಚಂಡೀಗಢ: ಸಟ್ಲೆಜ್ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಅಣೆಕಟ್ಟೆಯಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಹಾಕುತ್ತಿರುವ ಪಾಕಿಸ್ತಾನದ ನಡೆಯಿಂದ ಗಡಿಯಲ್ಲಿರುವ ಗಡಿಯಲ್ಲಿರುವ ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಬಹುತೇಕ ಗ್ರಾಮಗಳು ಮುಳುಗಡೆಯ ಭೀತಿ ಎದುರಿಸುತ್ತಿವೆ. ಫಿರೋಜ್ಪುರ ಜಿಲ್ಲಾಡಳಿತ ಹೈಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕೆಯಾಗಿ ಈಗಾಗಲೇ ಹಲವು ಗ್ರಾಮಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ನದಿ ತೀರದಲ್ಲಿನ ಗ್ರಾಮಸ್ಥರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲು ಕಾರ್ಯಸೂಚಿ ಸಿದ್ಧಪಡಿಸಿ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಜಲಸಂಪನ್ಮೂಲ ಸಚಿವಾಲಯಕ್ಕೆ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸೂಚನೆ ನೀಡಿದ್ದಾರೆ. ಫಿರೋಜ್ಪುರ ಜಿಲ್ಲೆ ಜತೆಗೆ ಜಲಂಧರ್, ಕಪೂರ್ಥಲಾ ಹಾಗೂ ರೂಪ್ನಗರ್ ಜಿಲ್ಲೆಗಳಲ್ಲಿಯೂ ಪ್ರವಾಹದ ಆತಂಕ ಎದುರಾಗಿದೆ. ಕೆಲ ದಿನಗಳ ಮುನ್ನ ತನ್ನ ಗಡಿಯಲ್ಲಿನ ಅಣೆಕಟ್ಟೆಗಳಿಂದ ಭಾರಿ ನೀರನ್ನು ಪಾಕ್ ಹರಿಬಿಟ್ಟ ಪರಿಣಾಮ ಫಿರೋಜ್ಪುರದ 17 ಗ್ರಾಮಗಳು ಜಲಾವೃತ್ತಗೊಂಡಿದ್ದವು. ಈಗಲೂ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
ಮತ್ತೆ ಹೆಚ್ಚು ನೀರು ಹರಿಸಿದ ಪಾಕ್
ಫಿರೋಜ್ಪುರ ಜಿಲ್ಲಾಡಳಿತ ಹೈಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕೆಯಾಗಿ ಈಗಾಗಲೇ ಹಲವು ಗ್ರಾಮಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.
PTI 26 Aug 2019, 5:00 am