ಆ್ಯಪ್ನಗರ

ಸರ್ಜಿಕಲ್ ದಾಳಿಗೊಳಗಾದ ಭಯೋತ್ಪಾದಕ ಶಿಬಿರಗಳು ಮತ್ತೆ ಸಕ್ರಿಯ, ಇಲ್ಲಿದ್ದಾರೆ 250 ಉಗ್ರರು

ಒಂದೆಡೆ ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಭಾರತದ ಜತೆ ಉತ್ತಮ ಸಂಬಂಧ ಬೆಳೆಸಲು ಮುಂದಾಗಿದ್ದರೆ, ಇನ್ನೊಂದೆಡೆ ಅಲ್ಲಿಯ ಸೇನೆಯ ಬೆಂಬಲದಿಂದ 250 ಭಯೋತ್ಪಾದಕರು ಗಡಿ ನುಸುಳಲು ಯತ್ನಿಸುತ್ತಿದ್ದಾರೆ.

Navbharat Times 27 Sep 2018, 12:12 pm
[This story originally published in Navbharat Times on Sep 27, 2018]
Vijaya Karnataka Web pak


ಶ್ರೀನಗರ: ಒಂದೆಡೆ ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಭಾರತದ ಜತೆ ಉತ್ತಮ ಸಂಬಂಧ ಬೆಳೆಸಲು ಮುಂದಾಗಿದ್ದರೆ, ಇನ್ನೊಂದೆಡೆ ಅಲ್ಲಿಯ ಸೇನೆ ಬೆಂಬಲದಿಂದ ಸುಮಾರು 250 ಭಯೋತ್ಪಾದಕರು ಗಡಿ ನುಸುಳಲು ಯತ್ನಿಸುತ್ತಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರದ ವಾಸ್ತವ ನಿಯಂತ್ರಣ ರೇಖೆಯುದ್ದ ಸುಮಾರು 27 ಪಾಕ್ ಬೆಂಬಲಿತ ಉಗ್ರ ಸಂಘಟನೆಗಳು ಶಿಬಿರಗಳನ್ನು ನಿರ್ಮಿಸಿಕೊಂಡಿದ್ದು, ಅಲ್ಲಿಂದ ಭಾರತದ ಗಡಿಯತ್ತ ನುಸುಳುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಎಂಟು ಉಗ್ರ ಸಂಘಟನೆಗಳು ಕಳೆದ ಒಂದು ತಿಂಗಳ ಹಿಂದೆಯೇ ಶಿಬಿರಗಳನ್ನು ಸ್ಥಾಪಿಸಿಕೊಂಡು ದುಷ್ಕೃತ್ಯಕ್ಕೆ ಸಂಚು ರೂಪಿಸುತ್ತಿವೆ ಎಂದು ತಿಳಿದು ಬಂದಿದೆ. ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಅಧಿಕಾರ ವಹಿಸಿಕೊಂಡ ಬಳಿಕ ಈ ಕ್ಯಾಂಪ್‌ಗಳಲ್ಲಿ ಸುಮಾರು 250ಕ್ಕೂ ಅಧಿಕ ಉಗ್ರರು ಜಮಾವಣೆಗೊಂಡಿದ್ದಾರೆ.

2016ರ ಸೆಪ್ಟೆಂಬರ್‌ನಲ್ಲಿ ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ದಾಳಿಯಲ್ಲಿ ಧ್ವಂಸಗೊಂಡಿದ್ದ ಉಗ್ರ ಶಿಬಿರಗಳನ್ನು ಮರುಸ್ಥಾಪಿಸುವ ದುಸ್ಸಾಹಸಕ್ಕೆ ಪಾಕಿಸ್ತಾನ ಕೈ ಹಾಕಿದೆ ಎಂದು ಗುಪ್ತಚರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರ ಶಿಬಿರಗಳು ನಿರ್ಮಾಣಗೊಂಡಿದ್ದು, ಲಿಪಾ, ಚಕೋತಿ, ಬಾರಾಕೋಟ್, ಶರ್ಡಿ ಹಾಗೂ ಜುರಾ ಪ್ರದೇಶದಲ್ಲಿರುವ ಶಿಬಿರಗಳನ್ನು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ನಡೆಸುತ್ತಿದೆ. ಇಲ್ಲಿನ ಮೂರು ಶಿಬಿರಗಳು ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದಕ ಸಂಘಟನೆಯದ್ದಾಗಿವೆ. ಇತರ ಮೂರು ಸ್ಥಳಗಳಲ್ಲಿಯೂ ಲಷ್ಕರ್ ಸಂಘಟನೆ ಶಿಬಿರಗಳನ್ನು ಸ್ಥಾಪಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ