ಆ್ಯಪ್ನಗರ

ಈದ್‌ನಂದೇ ಕದನ ವಿರಾಮ ಉಲ್ಲಂಘಿಸಿದ ಪಾಕ್; ಯೋಧ ಹುತಾತ್ಮ

ಈದ್ ಹಬ್ಬದ ದಿನವೇ ಪಾಕಿಸ್ತಾನ ಪಡೆಗಳು ಜಮ್ಮು ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು ಓರ್ವ ಯೋಧ ಹುತಾತ್ಮನಾಗಿದ್ದಾನೆ.

Vijaya Karnataka Web 16 Jun 2018, 4:09 pm
ಜಮ್ಮು: ಈದ್ ಹಬ್ಬದ ದಿನವೇ ಪಾಕಿಸ್ತಾನ ಪಡೆಗಳು ಜಮ್ಮು ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು ಓರ್ವ ಯೋಧ ಹುತಾತ್ಮನಾಗಿದ್ದಾನೆ.
Vijaya Karnataka Web bsf martyr

ಶನಿವಾರ ಬೆಳಗ್ಗೆ ಪಾಕ್ ಪಡೆಗಳು ಗಡಿಯಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಪಡೆಯ ಯೋಧರತ್ತ ಏಕಾಏಕಿ ಗುಂಡು ಹಾರಿಸಿದ್ದು, ಯೋಧ ಬಿಕಾಸ್ ಗುರುಂಗ್ ಹುತಾತ್ಮರಾಗಿದ್ದಾರೆ.

ಪಾಕಿಸ್ತಾನ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿರುವುದರಿಂದ ಮತ್ತು ಕದನ ವಿರಾಮ ಒಪ್ಪಂದವನ್ನು ಮುರಿಯುತ್ತಿರುವುದರಿಂದ ಈ ಬಾರಿ ಈದ್ ಹಬ್ಬದ ದಿನ ವಾಘಾ-ಅಟ್ಟಾರಿ ಗಡಿಯಲ್ಲಿ ಭದ್ರತಾ ಪಡೆ ಮತ್ತು ಪಾಕ್ ರೇಂಜರ್‌ಗಳ ಮಧ್ಯೆ ಸಿಹಿ ವಿನಿಮಯ ಕೂಡ ನಡೆದಿಲ್ಲ.

ಕಳೆದ ಮಂಗಳವಾರ ಪಾಕ್ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಗೆ ಬಿಎಸ್‌ಎಫ್‌ ಮೂರು ಅಧಿಕಾರಿಗಳು ಮತ್ತು ಓರ್ವ ಯೋಧ ಹುತಾತ್ಮರಾಗಿದ್ದರು. ಜೂನ್ 4ರಂದು ಭಾರತ ಮತ್ತು ಪಾಕಿಸ್ತಾನದ ಕಮಾಂಡರ್ ಮಟ್ಟದ ಧ್ವಜ ಸಭೆ ನಡೆದು ಕದನ ವಿರಾಮ ಜಾರಿಗೆ ನಿರ್ಧರಿಸಲಾಗಿತ್ತು. ಆದರೆ ಒಪ್ಪಂದ ಮುರಿದ ಪಾಕ್ ಮತ್ತೆ ಗುಂಡಿನ ದಾಳಿ ನಡೆಸುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ