ಆ್ಯಪ್ನಗರ

ಅಪ್ರಚೋದಿತ ಗುಂಡಿನ ದಾಳಿ: ಮೀಸೆ ಮಣ್ಣಾದರೂ ಬುದ್ದಿ ಕಲಿಯದ ಪಾಪಿಸ್ತಾನ

ಗುರುವಾರ ಸಂಜೆಯಿಂದಲೂ ಕಾಶ್ಮೀರದ ಬರಮುಲ್ಲಾದ ಉರಿ ಸೆಕ್ಟರ್‌ನ ಕಮಲಕೋಟೆ ಪ್ರದೇಶದಲ್ಲಿ ಪಾಕ್ ಪಡೆಗಳು ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಲೇ ಇದ್ದು, ನಾಗರಿಕರೊಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

TIMESOFINDIA.COM 1 Mar 2019, 10:49 am
ಶ್ರೀನಗರ: ಪುಲ್ವಾಮಾ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಯೋಧರು ಮುಟ್ಟಿನೋಡಿಕೊಳ್ಳುವಂತ ಹೊಡೆತ ನೀಡಿದ್ದರೂ ಪಾಪಿಸ್ತಾನ ಮಾತ್ರ ಬುದ್ದಿ ಕಲೆತಂತೆ ಕಾಣುತ್ತಿಲ್ಲ.
Vijaya Karnataka Web indian army


ಹೌದು, ಶುಕ್ರವಾರ ಬೆಳಿಗ್ಗೆಯೂ ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಪಾಕ್ ಮತ್ತೆ ತನ್ನ ನರಿ ಬುದ್ಧಿ ಪ್ರದರ್ಶಿಸಿದೆ.

ಗುರುವಾರ ಸಂಜೆಯಿಂದಲೂ ಕಾಶ್ಮೀರದ ಬರಮುಲ್ಲಾದ ಉರಿ ಸೆಕ್ಟರ್‌ನ ಕಮಲಕೋಟೆ ಪ್ರದೇಶದಲ್ಲಿ ಪಾಕ್ ಪಡೆಗಳು ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಲೇ ಇದ್ದು, ನಾಗರಿಕರೊಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.



ಭಾರತೀಯ ಯೋಧರು ಸಹ ತಕ್ಕ ಪ್ರತ್ಯುತ್ತರ ನೀಡುತ್ತಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಭಾರತ-ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಕವಿಯುತ್ತಿದ್ದಂತೆಯೇ, ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಬುಧವಾರ ಮತ್ತೊಮ್ಮೆ ಶಾಂತಿ ಮಂತ್ರ ಪಠಿಸಿದ್ದಾರೆ. ಇದರ ಬೆನ್ನಲ್ಲೆ ಪಾಕ್ ಪಡೆ ಪದೇ ಪದೇ ಕದನ ವಿರಾಮ ಉಲ್ಲಂಘಿಸಿದ್ದು, ತಮ್ಮ ದಷ್ಟತನವನ್ನು ಪ್ರದರ್ಶಿಸಿವೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಬುಧವಾರ ಬೆಳಗ್ಗೆ ಪಾಕಿಸ್ತಾನದ ಜೆಟ್‌ಗಳು ಭಾರತೀಯ ವಾಯುಗಡಿ ಉಲ್ಲಂಘಿಸಿ ಗಡಿಯೊಳಕ್ಕೆ ಪ್ರವೇಶಿಸಲು ಯತ್ನಿಸಿದ್ದು, ಭಾರತೀಯ ವಿಮಾನ ಅವುಗಳತ್ತ ಗುಂಡು ಹಾರಿಸಿ ಹಿಮ್ಮೆಟ್ಟಿಸಿದ್ದವು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ