ಆ್ಯಪ್ನಗರ

ಅಮೆರಿಕ ಎಚ್ಚರಿಕೆ ನಡುವೆಯೂ ಪಾಕ್‌ ತಡೆ: ಗಡಿಯಲ್ಲಿ ಗುಂಡಿನ ದಾಳಿ, ಯೋಧ ಹುತಾತ್ಮ

ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಮತ್ತು ಬಂಡಿಪೋರಾ ಜಿಲ್ಲೆಗಳ ಮೂರು ವಿವಿಧ ಕಡೆ ಭಯೋತ್ಪಾದಕರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆ ಮುಂದುವರಿದಿದೆ.

Vijaya Karnataka Web 21 Mar 2019, 9:34 pm
ಶ್ರೀನಗರ: ಭಾರತದ ಮೇಲೆ ದಾಳಿ ನಡೆಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಅಮೆರಿಕ ಎಚ್ಚರಿಸಿದ ಬೆನ್ನಲ್ಲೇ ಪಾಕಿಸ್ತಾನ ಮತ್ತೆ ತಂಟೆ ತೆಗೆದಿದೆ.
Vijaya Karnataka Web ಯೋಧ
ಯೋಧ


ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿಯ ಸುಂದರ್‌ಬನಿ ಪ್ರಾಂತ್ಯದಲ್ಲಿ ಪಾಕಿಸ್ತಾನಿ ಪಡೆಗಳು ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ಭಾರತದ ಮುಂಚೂಣಿ ನೆಲೆಗಳಾದ ಪಲ್ಲನ್‌ವಾಲಾ, ಜೋಗ್ವಾನ್ ಮತ್ತು ಕೇರ್ರಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಡೆಗಳು ಅಪ್ರಚೋದಿತ ದಾಳಿ ನಡೆಸಿವೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ನಡೆಯುತ್ತಿದ್ದಂತೆ ಭಾರತೀಯ ಪ್ರತಿದಾಳಿ ನಡೆಸಿದರು.

ಇದೇ ಪ್ರದೇಶದಲ್ಲಿ ಮಂಗಳವಾರ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ ಘಟನೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದರು

ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಮತ್ತು ಬಂಡಿಪೋರಾ ಜಿಲ್ಲೆಗಳ ಮೂರು ವಿವಿಧ ಕಡೆ ಭಯೋತ್ಪಾದಕರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆ ಮುಂದುವರಿದಿದೆ.

ಪ್ರದೇಶದಲ್ಲಿ ಭಯೋತ್ಪಾದಕರಿಗಾಗಿ ಶೋಧ ಕಾರ್ಯ ನಡೆದ ಸಂದರ್ಭದಲ್ಲಿ ಗುಂಡಿನ ಚಕಮಕಿ ನಡೆದ ಬಗ್ಗೆ ವರದಿಯಾಗಿದೆ. ಭಯೋತ್ಪಾದಕರ ಅಡಗು ತಾಣವೊಂದನ್ನು ಧ್ವಂಸಗೊಳಿಸಲಾಗಿದೆ.

ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ