ಆ್ಯಪ್ನಗರ

ಕಾಶ್ಮೀರದ ಪಂಚ್-ಸರ್‌ಪಂಚರಿಗೆ ಭದ್ರತೆ, 2 ಲಕ್ಷ ರೂ. ವಿಮಾ ಸೌಲಭ್ಯ: ಅಮಿತ್ ಶಾ ಭರವಸೆ

ಕಾಶ್ಮೀರದ ಪಂಚಾಯತ ಸದಸ್ಯರು ಹಾಗೂ ಗ್ರಾಮದ ಮುಖ್ಯಸ್ಥರಿಗೆ 2 ಲಕ್ಷ ರೂಪಾಯಿ ವಿಮಾ ಸೌಲಭ್ಯ ಕಲ್ಪಿಸಿಕೊಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

Navbharat Times 3 Sep 2019, 6:01 pm
ಹೊಸದಿಲ್ಲಿ: ಕಣಿವೆ ನಾಡು ಜಮ್ಮು-ಕಾಶ್ಮೀರದಲ್ಲಿ ಪಂಚಾಯತ ಸದಸ್ಯ (ಪಂಚ್) ಹಾಗೂ ಗ್ರಾಮದ ಮುಖ್ಯಸ್ಥರಿಗೆ (ಸರ್‌ಪಂಚ್) ಪೊಲೀಸ್ ಭದ್ರತೆ ಮತ್ತು 2 ಲಕ್ಷ ರೂಪಾಯಿ ವಿಮಾ ಸೌಲಭ್ಯ ಒದಗಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
Vijaya Karnataka Web amit shah


ಇಂದು ಕಾಶ್ಮೀರದ ಪಂಚಾಯತ ಸದಸ್ಯರು ಹಾಗೂ ಗ್ರಾಮದ ಮುಖ್ಯಸ್ಥರ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿದ್ದು, ಸೂಕ್ತ ಭದ್ರತೆ ನೀಡುವಂತೆ ಮನವಿ ಮಾಡಿತ್ತು. ಮನವಿಗೆ ಸ್ಪಂದಿಸಿರುವ ಗೃಹ ಸಚಿವ ಶಾ, ಪೊಲೀಸ್ ಭದ್ರತೆ ಹಾಗೂ ವಿಮೆಯ ಭರವಸೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಗರ ಜಿಲ್ಲೆಯ ಹರ್ವಾನ್ ಗ್ರಾಮದ ಸರ್‌ಪಂಚ್ ಜುಬೇರಾ ನಿಷಾದ್ ಭಟ್, 'ಕಣಿವೆ ನಾಡಿನ ಎಲ್ಲ ಪಂಚಾಯತ ಸದಸ್ಯರು ಮತ್ತು ಗ್ರಾಮದ ಮುಖ್ಯಸ್ಥರಿಗೆ 2 ಲಕ್ಷ ರೂಪಾಯಿಗಳ ವಿಮಾ ಸೌಲಭ್ಯ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಅಷ್ಟೆ ಅಲ್ಲದೆ, ಮುಂದಿನ 15-20 ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಮೊಬೈಲ್ ಫೋನ್ ಸೇವೆಗಳನ್ನು ಪುನಃ ಆರಂಭಿಸುವುದಾಗಿ ಗೃಹ ಸಚಿವರು ನಿಯೋಗಕ್ಕೆ ತಿಳಿಸಿರುವುದಾಗಿ ಹೇಳಿದರು.

ಸಂಸತ್ತಿನಲ್ಲಿ ಭರವಸೆ ನೀಡಿರುವಂತೆ ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ಬಳಿಕ ಪ್ರತ್ಯೇಕ ರಾಜ್ಯ ಆಡಳಿತ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ ಎನ್ನುವುದನ್ನು ನಿಷಾದ್ ಭಟ್ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ