ಆ್ಯಪ್ನಗರ

ಅತ್ಯಾಚಾರದ ಆರೋಪಿಗೆ ಕಾಂಗ್ರೆಸ್‌ ಟಿಕೆಟ್..! ವಿರೋಧಿಸಿದ ಕಾರ್ಯಕರ್ತೆಗೆ ಸ್ವಪಕ್ಷಿಯರಿಂದಲೇ ಥಳಿತ

ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿದ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯನ್ನು ಪಕ್ಷದ ಆಂತರಿಕ ಸಭೆಯಲ್ಲಿ ಸ್ವಪಕ್ಷೀಯರೇ ಥಳಿಸಿರುವ ಘಟನೆ ನಡೆದಿದ್ದು, ಪಕ್ಷಾತೀತವಾಗಿ ವಿರೋಧ ವ್ಯಕ್ತವಾಗಿದೆ.

ANI 11 Oct 2020, 5:03 pm
ಡಿಯೋರಿಯಾ: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿದ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯನ್ನು ಪಕ್ಷದ ಆಂತರಿಕ ಸಭೆಯಲ್ಲಿ ಸ್ವಪಕ್ಷೀಯರೇ ಥಳಿಸಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.
Vijaya Karnataka Web party ticket being given to rapist congress worker thrashed in uttar pradeshs deoria
ಅತ್ಯಾಚಾರದ ಆರೋಪಿಗೆ ಕಾಂಗ್ರೆಸ್‌ ಟಿಕೆಟ್..! ವಿರೋಧಿಸಿದ ಕಾರ್ಯಕರ್ತೆಗೆ ಸ್ವಪಕ್ಷಿಯರಿಂದಲೇ ಥಳಿತ


ಕಾಂಗ್ರೆಸ್‌ ಕಾರ್ಯಕರ್ತೆ ತಾರಾ ದೇವಿ ಸಿಂಗ್‌ ಮೇಲೆ ಹಲ್ಲೆ ನಡೆದಿರುವ ವಿಡಿಯೋ ಭಾರೀ ವೈರಲ್‌ ಆಗಿದ್ದು, ಪಕ್ಷಾತೀತವಾಗಿ ವಿರೋಧ ವ್ಯಕ್ತವಾಗಿದೆ. ಇನ್ನು, ಒಂದು ಕಡೆ ಹತ್ರಾಸ್‌ ಸಂತ್ರಸ್ತೆಗೆ ನ್ಯಾಯ ದೊರಕಿಸಲು ನಮ್ಮ ನಾಯಕರು ಹೋರಾಡುತ್ತಿದ್ದಾರೆ. ಮತ್ತೊಂದು ಕಡೆ ಅತ್ಯಾಚಾರಿಗಳಿಗೆ ಪಕ್ಷ ಟಿಕೆಟ್‌ ನೀಡುತ್ತಿದೆ. ಇಂತಹ ತಪ್ಪು ನಿರ್ಧಾರಗಳಿಂದ ಪಕ್ಷದ ಇಮೇಜ್‌ ಹಾಳಾಗುತ್ತಿದೆ ಎಂದು ತಾರಾ ದೇವಿ ಸಿಂಗ್‌ ಹೇಳಿದ್ದಾರೆ.


ಹಲ್ಲೆಗೆ ಸಂಬಂಧಿಸಿದಂತೆ ತಾರಾ ದೇವಿ ಸಿಂಗ್‌ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಧರ್ಮೆಂದ್ರ ಸಿಂಗ್‌, ಉಪಾಧ್ಯಕ್ಷ ಅಜಯ್‌ ಸಿಂಗ್‌ ಮತ್ತಿಬ್ಬರ ಮೇಲೆ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ದೂರಿನಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು ಮತ್ತು ಕಿರುಕುಳ ನೀಡಿದ್ದಾರೆ ಎಂದು ತಾರಾ ದೇವಿ ಸಿಂಗ್‌ ತಿಳಿಸಿದ್ದಾರೆ.

ಹತ್ರಾಸ್‌ ಪ್ರಕರಣ: ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬಿಜೆಪಿ ಶಾಸಕ ಜನ್ಮೇಜಯ್‌ ಸಿಂಗ್‌ ಸಾವಿನ ನಂತರ ಡಿಯೋರಿಯಾ ಕ್ಷೇತ್ರಕ್ಕೆ ಉಪಚುನಾವಣೆ ನಿಗದಿಯಾಗಿದೆ. ಕಾಂಗ್ರೆಸ್‌ನಿಂದ ಮುಕುಂದ್ ಭಾಸ್ಕರ್ ಎಂಬಾತನಿಗೆ ಟಿಕೆಟ್‌ ನೀಡಿದ್ದು, ಆತನ ವಿರುದ್ಧ ಅತ್ಯಾಚಾರದ ಆರೋಪವಿದ್ದು, ಟಿಕೆಟ್ ನೀಡಿದ್ದನ್ನು ಕಾಂಗ್ರೆಸ್ ಕಾರ್ಯಕರ್ತೆ ತಾರಾ ಯಾದವ್ ಪ್ರತಿಭಟಿಸಿದ್ದರು. ಈ ಹಂತದಲ್ಲಿ ಅವರ ಮೇಲೆ ಸ್ವಪಕ್ಷೀಯರೇ ಥಳಿಸಿ ಹಲ್ಲೆ ನಡೆಸಿದ್ದಾರೆ.

ನಮ್ಮಿಬ್ಬರ ಸ್ನೇಹ ಸಹಿಸದೇ ಆಕೆಯ ಕುಟುಂಬದಿಂದಲೇ ಯುವತಿ ಕೊಲೆ: ಹತ್ರಾಸ್‌ ಕೇಸ್‌ನ ಆರೋಪಿ

ತಾರಾ ಯಾದವ್ ಮೇಲೆ ನಡೆದಿರುವ ಹಲ್ಲೆಗೆ ಪಕ್ಷಾತೀತವಾಗಿ ಖಂಡನೆ ವ್ಯಕ್ತವಾಗಿದೆ. ತಾರಾ ಯಾದವ್ ಮೇಲೆ ನಡೆದ ಹಲ್ಲೆ ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಗೌರವ ಎಷ್ಟಿದೆ ಎಂಬುದನ್ನು ತೋರಿಸುತ್ತದೆ ಎಂದು ಬಿಜೆಪಿ ಪ್ರತಿಕ್ರಿಯೆ ನೀಡಿದ್ದರೆ, ಘಟನೆ ಖಂಡಿಸಿರುವ ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ