ಆ್ಯಪ್ನಗರ

ಸಚಿನ್‌ ಪೈಲಟ್‌ಗೆ ಸಿಎಂ ಹುದ್ದೆ ಆಗ್ರಹಿಸಿ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ

ಸಚಿನ್ ಪೈಲಟ್ ಅವರಿಗೆ ಸಿಎಂ ಸ್ಥಾನ ನೀಡಬೇಕು, ರಾಜ್ಯದಲ್ಲಿ ಪಕ್ಷ ಸಂಘಟನೆಯಿಂದ ಹಿಡಿದು ಕಾಂಗ್ರೆಸ್ ಅಧಿಕಾರಕ್ಕೇರುವಲ್ಲಿ ಶ್ರಮಿಸಿದ್ದರೂ, ಸಚಿನ್ ಪೈಲಟ್‌ಗೆ ಸಿಎಂ ಹುದ್ದೆ ತಪ್ಪಿಸಲಾಗುತ್ತಿದೆ ಎಂದು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka Web 13 Dec 2018, 7:58 pm
ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ಬಹುಮತ ಪಡೆದು ಸರಕಾರ ರಚನೆಯ ಸಿದ್ಧತೆಯಲ್ಲಿದ್ದು, ಸಿಎಂ ಹುದ್ದೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ಬೆಂಬಲಿಗರು ಮತ್ತು ಗುಜ್ಜರ್ ಸಮುದಾಯದವರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
Vijaya Karnataka Web Sachin Pilot


ಸಚಿನ್ ಪೈಲಟ್ ಅವರಿಗೆ ಸಿಎಂ ಸ್ಥಾನ ನೀಡಬೇಕು, ರಾಜ್ಯದಲ್ಲಿ ಪಕ್ಷ ಸಂಘಟನೆಯಿಂದ ಹಿಡಿದು ಕಾಂಗ್ರೆಸ್ ಅಧಿಕಾರಕ್ಕೇರುವಲ್ಲಿ ಶ್ರಮಿಸಿದ್ದರೂ, ಸಚಿನ್ ಪೈಲಟ್‌ಗೆ ಸಿಎಂ ಹುದ್ದೆ ತಪ್ಪಿಸಲಾಗುತ್ತಿದೆ ಎಂದು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಭಾರೀ ಸಂಖ್ಯೆಯಲ್ಲಿ ಸೇರಿರುವ ಬೆಂಬಲಿಗರು ಮತ್ತು ಗುಜ್ಜರ್ ಸಮುದಾಯದ ಮುಖಂಡರು, ಸಮುದಾಯದ ಜನರು ಜೈಪುರ-ಆಗ್ರಾ ಹೆದ್ದಾರಿಯನ್ನು ಬಂದ್ ಮಾಡಿದ್ದಾರೆ. ಜತೆಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳಿಗೂ ಕಲ್ಲುತೂರಾಟ ನಡೆಸಿ ಹಾನಿಯೆಸಗಿದ್ದಾರೆ.

ಶಾಂತಿ ಕಾಪಾಡಲು ಸಚಿನ್ ಪೈಲಟ್ ಮನವಿ:

ಬೆಂಬಲಿಗರು ಹೆದ್ದಾರಿ ಬಂದ್ ಮಾಡಿ ಹಿಂಸಾಚಾರಕ್ಕೆ ಇಳಿದ ಬೆನ್ನಲ್ಲೇ ಸಚಿನ್ ಪೈಲಟ್, ಹಿಂಸಾಚಾರಕ್ಕೆ ಯತ್ನಿಸಬೇಡಿ. ಶಾಂತಿಯಿಂದ ವರ್ತಿಸಿ ಮತ್ತು ಸಾರ್ವಜನಿಕ ಆಸ್ತಪಾಸ್ತಿಗೆ ಹಾನಿಯೆಸಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.


ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲೂ ಸಿಎಂ ಹುದ್ದೆಗೆ ಪೈಪೋಟಿ ಆರಂಭವಾಗಿದ್ದು, ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ