ಆ್ಯಪ್ನಗರ

108 ಆಂಬುಲೆನ್ಸ್‌ನಲ್ಲಿ ಡೀಸೆಲ್ ಖಾಲಿ: ಆಸ್ಪತ್ರೆಗೆ ತೆರಳುವ ಮೊದಲೇ ರೋಗಿ ಸಾವು

Patient Dies in Ambulance: ರೋಗಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ 108 ಆಂಬುಲೆನ್ಸ್ ಮಾರ್ಗಮಧ್ಯೆ ಡೀಸೆಲ್ ಖಾಲಿಯಾದ ಪರಿಣಾಮ ರಸ್ತೆಯಲ್ಲಿಯೇ ನಿಂತುಹೋಗಿದೆ. ತೀವ್ರ ಅನಾರೋಗ್ಯಕ್ಕೆ ಒಳಗಿದ್ದ ರೋಗಿ ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಮೃತಪಟ್ಟಿದ್ದಾರೆ.

Authored byಅಮಿತ್ ಎಂ.ಎಸ್ | Vijaya Karnataka Web 26 Nov 2022, 8:56 pm

ಹೈಲೈಟ್ಸ್‌:

  • ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದ ಘಟನೆ
  • ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ನಲ್ಲಿ ಡೀಸೆಲ್ ಖಾಲಿ
  • ಮಾರ್ಗಮಧ್ಯೆ ಕೆಟ್ಟು ನಿಂತ ಆಂಬುಲೆನ್ಸ್‌ನಲ್ಲಿದ್ದ ರೋಗಿ ಸಾವು

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Ambulance
ಜೈಪುರ: ಆಂಬುಲೆನ್ಸ್‌ನ ಇಂಧನ ಟ್ಯಾಂಕ್‌ನ ಡೀಸೆಲ್ ಖಾಲಿಯಾದ ಪರಿಣಾಮ ವಾಹನ ಕೆಟ್ಟು ನಿಂತು, ರೋಗಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದಿದೆ. ಈ ಘಟನೆ ಸಂಬಂಧ ತನಿಖೆಗೆ ರಾಜಸ್ಥಾನ ಆರೋಗ್ಯ ಇಲಾಖೆ ಆದೇಶಿಸಿದೆ.
ಬನ್ಸ್ವಾರಾ ಜಿಲ್ಲೆಯ ದಾನಾಪುರ ಪ್ರದೇಶದಲ್ಲಿ ಪ್ರಜ್ಞಾಹೀನರಾಗಿದ್ದ 40 ವರ್ಷದ ತೇಜಿಯಾ ಎಂಬುವವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಕರು 108 ಆಂಬುಲೆನ್ಸ್‌ಗೆ ಕರೆ ಮಾಡಿದ್ದರು.
ಇದು ಬುಲ್ಡೋಜರ್ ಅಲ್ಲ, 'ಆಂಬುಲೆನ್ಸ್': ಗಾಯಾಳು ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದು ಹೀಗೆ ನೋಡಿ!

ಬನ್ಸ್ವಾರಾದಿಂದ 10-12 ಕಿಮೀ ದೂರದಲ್ಲಿರುವ ರಾತ್ಲಂ ರಸ್ತೆ ಟೋಲ್ ಸಮೀಪದ ಜಿಲ್ಲಾ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಆಂಬುಲೆನ್ಸ್ ಹಠಾತ್ತನೆ ನಿಂತುಹೋಗಿದೆ. ಆಂಬುಲೆನ್ಸ್‌ನಲ್ಲಿದ್ದ ಡೀಸೆಲ್ ಸಂಪೂರ್ಣ ಖಾಲಿಯಾದ ಕಾರಣ ಅತಂತ್ರ ಸ್ಥಿತಿ ಉಂಟಾಗಿದೆ. ಕೂಡಲೇ ಬೇರೊಂದು ಆಂಬುಲೆನ್ಸ್ ಅನ್ನು ತರಿಸಿ, ಅದರಲ್ಲಿ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಕರೆ ತಂದಾಗ ರೋಗಿ ಆಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

"ಈ ವಿಚಾರದ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ. ನಮಗೆ ಯಾವುದೇ ದೂರು ಬಂದಿಲ್ಲ. ಆಂಬುಲೆನ್ಸ್‌ನಲ್ಲಿ ಡೀಸೆಲ್ ಖಾಲಿಯಾಗಿತ್ತು ಎಂಬ ಮಾಹಿತಿ ಬಂದಿದೆ" ಎಂದು ಅವರು ಹೇಳಿದ್ದಾರೆ.
ಸರಕಾರ ಅನುದಾನ ನೀಡಿದ್ದರೂ ಏರಿಕೆಯಾಗದ 108 ಸಿಬ್ಬಂದಿ ವೇತನ, ಮತ್ತೆ ಪ್ರತಿಭಟನೆ ಎಚ್ಚರಿಕೆ

ಈ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬನ್ಸ್ವಾರಾದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಎಚ್‌ಎಲ್ ತಬಿಯಾರ್ ತಿಳಿಸಿದ್ದಾರೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ