ಆ್ಯಪ್ನಗರ

ಪ್ರಶಂಸೆಗೆ ಕಾರಣವಾದ ಮಣಿಪುರ ಐಎಎಸ್ ಅಧಿಕಾರಿ ಕಾರ್ಯ

ಭೀಕರ ಮಳೆಯನ್ನೂ ಲೆಕ್ಕಿಸದೆ ಪ್ರವಾಹ ಪೀಡಿತರಿಗೆ ದಿಲೀಪ್ ಸಿಂಗ್ ಎಂಬ ಐಎಎಸ್ ಅಧಿಕಾರಿ ನೆರವಾಗಿದ್ದು, ಅವರ ಕಾರ್ಯಕ್ಕೆ ಟ್ವಿಟರ್ ಮತ್ತು ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಪ್ರಶಂಸೆ ಕೇಳಿಬಂದಿದೆ.

Vijaya Karnataka Web 14 Jun 2018, 3:27 pm
ಇಂಫಾಲ: ರಾಜ್ಯದ ಎಲ್ಲೆಡೆ ಮಳೆ ಆರ್ಭಟ ನಡೆದಿರುವಂತೆಯೇ ಮಣಿಪುರದಲ್ಲೂ ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಜೋರಾಗಿದೆ. ಇಂಫಾಲದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವವಾಗಿದೆ. ಅಲ್ಲಿ ಭೀಕರ ಮಳೆಯನ್ನೂ ಲೆಕ್ಕಿಸದೆ ಪ್ರವಾಹ ಪೀಡಿತರಿಗೆ ದಿಲೀಪ್ ಸಿಂಗ್ ಎಂಬ ಐಎಎಸ್ ಅಧಿಕಾರಿ ನೆರವಾಗಿದ್ದು, ಅವರ ಕಾರ್ಯಕ್ಕೆ ಟ್ವಿಟರ್ ಮತ್ತು ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಪ್ರಶಂಸೆ ಕೇಳಿಬಂದಿದೆ.
Vijaya Karnataka Web Manipur ias


ಸರಕಾರ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ಕೈಗೊಂಡಿದೆ. ಪ್ರವಾಹ ನಿಯಂತ್ರಣ ಇಲಾಖೆಯ ಕಾರ್ಯದರ್ಶಿ ದಿಲೀಪ್ ಸಿಂಗ್, ನೆರೆ ನಿಯಂತ್ರಣಕ್ಕೆ ಸ್ವತಃ ನೀರಿಗೆ ಇಳಿದಿದ್ದಾರೆ.


ರಕ್ಷಣಾ ಪಡೆಯ ಜತೆಗೆ ದಿಲೀಪ್ ಸಿಂಗ್ ಮಳೆಯನ್ನೂ ಲೆಕ್ಕಿಸದೆ ಕೆಲಸ ಮಾಡುತ್ತಿರುವ ಚಿತ್ರಗಳು ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಜನರು ಐಎಎಸ್ ಅಧಿಕಾರಿಯ ಕಾರ್ಯುವನ್ನು ಪ್ರಶಂಶಿಸಿದರೆ, ಪರಿಹಾರ ಕಾರ್ಯಕ್ಕೆ ಸೂಕ್ತ ವ್ಯವಸ್ಥೆ ಮಾಡದ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈಶಾನ್ಯ ರಾಜ್ಯದ ಗೋಮತಿ, ಡಿಯೋ, ಮಾನು ಮತ್ತು ಹೋರಾದಲ್ಲೂ ಭಾರಿ ಮಳೆಯಾಗುತ್ತಿದೆ. ಅಸ್ಸಾಂನಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವಿಸಿದ್ದು, 10 ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ