ಆ್ಯಪ್ನಗರ

ಮೋದಿ ವಿರುದ್ಧ ಘೋಷಣೆ ಕೂಗಿದರೆ ಸಜೀವ ದಹನ ! ಬಿಜೆಪಿ ಸಚಿವರೊಬ್ಬರಿಂದ ಹೀಗೊಂದು ಎಚ್ಚರಿಕೆ

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಘೋಷಣೆ ಕೂಗಿದರೆ ಸಜೀವ ದಹನ ಮಾಡಲಾಗುವುದು ಎಂದು ಬಿಜೆಪಿಯ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Agencies 13 Jan 2020, 9:28 pm
ಅಲಿಘಡ (ಉತ್ತರ ಪ್ರದೇಶ) : ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ಘೋಷಣೆ ಕೂಗಿದರೆ ಅವರನ್ನು ಜೀವಂತ ಸುಡಲಾಗುವುದು ಎಂದು ಉತ್ತರ ಪ್ರದೇಶ ಬಿಜೆಪಿ ಸಚಿವ ರಘುರಾಜ್‌ ಸಿಂಗ್‌ ಬಹಿರಂಗ ಬೆದರಿಕೆ ಒಡ್ಡಿದ್ದಾರೆ.
Vijaya Karnataka Web people raising slogan against pm modi will be buried alive says bjp minister
ಮೋದಿ ವಿರುದ್ಧ ಘೋಷಣೆ ಕೂಗಿದರೆ ಸಜೀವ ದಹನ ! ಬಿಜೆಪಿ ಸಚಿವರೊಬ್ಬರಿಂದ ಹೀಗೊಂದು ಎಚ್ಚರಿಕೆ


ಪೌರತ್ವ ತಿದ್ದುಪಡಿ ಕಾಯಿದೆ ಪರ ಆಲಿಘಡದಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಎಎ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದ ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

ಈ ಬಗ್ಗೆ ಪ್ರಸ್ತಾಪಿಸಿದ ಸಚಿವರು, ''ದೇಶದಲ್ಲಿ ಶೇ. 1ರಷ್ಟು ಜನರು ಮಾತ್ರ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುತ್ತಿದ್ದಾರೆ. ನಮ್ಮ ತೆರಿಗೆ ಹಣ ತಿಂದು, ನಮ್ಮ ನಾಯಕರ ವಿರುದ್ಧವೇ ಘೋಷಣೆಗಳನ್ನು ಕೂಗುತ್ತಾರೆ.

ವಿವಾದದಲ್ಲಿ ಶಿವಾಜಿ-ಮೋದಿ ಹೋಲಿಕೆ ಪುಸ್ತಕ, ಮರಾಠಿಗರನ್ನು ಕೆರಳಿಸಬೇಡಿ ಎಂದ ಛತ್ರಪತಿ ವಂಶಸ್ಥ

ಈ ದೇಶ ಎಲ್ಲಾ ಜಾತಿ, ಧರ್ಮ, ನಂಬಿಕೆಯನ್ನು ಹೊಂದಿರುವ ಜನರಿಗೆ ಸೇರಿದ್ದು. ಆದರೆ ಪ್ರಧಾನಿ ಮತ್ತು ಸಿಎಂ ವಿರುದ್ಧ ಘೋಷಣೆಗಳನ್ನು ಕೂಗಿದರೆ ಸಹಿಸುವುದಿಲ್ಲ,'' ಎಂದು ವಿವಾದಾತ್ಮಕವಾದ ಎಚ್ಚರಿಕೆ ನೀಡಿದ್ದಾರೆ.

ಉಗ್ರರನ್ನು ಸಾಗಿಸಲು 12 ಲಕ್ಷ ರೂ. ಪಡೆದಿದ್ದ ಡಿಎಸ್‌ಪಿ ದೇವಿಂದರ್‌ ಸಿಂಗ್‌!

ಭಾರತದ ಮೊದಲ ಪ್ರಧಾನಿ ಜವಾಹರ್‌ ಲಾಲ್‌ ನೆಹರೂ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ''ನೆಹರೂರವರ ಜಾತಿ ಯಾವುದು? ಅವರಿಗೆ ಯಾವುದೇ ಖಾನ್‌ದಾನ್‌ ಇರಲಿಲ್ಲ,'' ಎಂದಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು ಬಿಜೆಪಿಯ ವಿರುದ್ಧ ಪ್ರತಿಭಟನಾಕಾರರು ಘೋಷಣೆಯನ್ನು ಕೂಗುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ