ಆ್ಯಪ್ನಗರ

ಜೈ ಶ್ರೀರಾಮ್‌ ಘೋಷಣೆ ಮೂಲಭೂತ ಹಕ್ಕಾಗಲಿ: ಹೈಕೋರ್ಟ್‌ನಲ್ಲಿ ಪಿಐಎಲ್‌

ಮುಖ್ಯ ನ್ಯಾಯಮೂರ್ತಿ ಟಿ.ಬಿ.ಎನ್‌.ರಾಧಾಕೃಷ್ಣನ್‌ ನೇತೃತ್ವದ ವಿಭಾಗೀಯ ಪೀಠವು ಅರ್ಜಿ ವಿಚಾರಣೆಗೆ ಸಮ್ಮತಿ ಸೂಚಿಸಿತಾದರೂ, ತಕ್ಷಣದ ಮಧ್ಯಪ್ರವೇಶಕ್ಕೆ ನಿರಾಕರಿಸಿತು. ''ಜನರ ಧ್ವನಿ ಹತ್ತಿಕ್ಕಲಾಗುತ್ತಿದೆ ಎನ್ನುವುದು ನಮ್ಮ ಗಮನಕ್ಕೂ ಬಂದಿದೆ.

PTI 15 Jun 2019, 7:20 am
ಕೋಲ್ಕೊತಾ: 'ಜೈ ಶ್ರೀರಾಮ್‌' ಘೋಷಣೆ ಕೂಗುವುದನ್ನು ಮೂಲಭೂತ ಹಕ್ಕೆಂದು ಘೋಷಿಸುವಂತೆ ಆಗ್ರಹಿಸಿ ವಕೀಲರೊಬ್ಬರು ಕಲ್ಕತ್ತಾ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಜೈ ಶ್ರೀರಾಮ್‌ ಘೋಷಣೆ ಕೂಗಿದವರ ವಿರುದ್ಧ ರಾಜ್ಯದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ವರದಿಗಳನ್ನು ಆಧಾರವಾಗಿಟ್ಟುಕೊಂಡು ವಕೀಲ ಪಾರ್ಥ ಘೋಷ್‌ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ದಾಖಲಿಸಿದ್ದಾರೆ.
Vijaya Karnataka Web ram


ಮುಖ್ಯ ನ್ಯಾಯಮೂರ್ತಿ ಟಿ.ಬಿ.ಎನ್‌.ರಾಧಾಕೃಷ್ಣನ್‌ ನೇತೃತ್ವದ ವಿಭಾಗೀಯ ಪೀಠವು ಅರ್ಜಿ ವಿಚಾರಣೆಗೆ ಸಮ್ಮತಿ ಸೂಚಿಸಿತಾದರೂ, ತಕ್ಷಣದ ಮಧ್ಯಪ್ರವೇಶಕ್ಕೆ ನಿರಾಕರಿಸಿತು. ''ಜನರ ಧ್ವನಿ ಹತ್ತಿಕ್ಕಲಾಗುತ್ತಿದೆ ಎನ್ನುವುದು ನಮ್ಮ ಗಮನಕ್ಕೂ ಬಂದಿದೆ. ಆದರೆ ನಾವಾಗಿ ಯಾವುದೇ ಕ್ರಮ ಕೈಗೊಳ್ಳಲಾಗದು. ಸಂತ್ರಸ್ತರು ಪೊಲೀಸ್‌ ದೂರು ಅಥವಾ ಕಾನೂನು ಕ್ರಮಕ್ಕೆ ಮುಂದಾಗಬಹುದು,'' ಎಂದು ಪೀಠದಲ್ಲಿದ್ದ ನ್ಯಾ.ಸೌರಾ ಘೋಷ್‌ ಅಭಿಪ್ರಾಯಪಟ್ಟರು. ವಿಚಾರಣೆಯನ್ನು ನಾಲ್ಕು ವಾರ ಕಾಲ ಮುಂದೂಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ