ಹೊಸದಿಲ್ಲಿ: ದೇಶದ ಅತ್ಯುನ್ನತ ತನಿಖಾ ಸಂಸ್ಥೆ ಸಿಬಿಐಗೆ ಹೊಸ ಮುಖ್ಯಸ್ಥರನ್ನು ನೇಮಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಆಯ್ಕೆ ಸಮಿತಿಯು ಶುಕ್ರವಾರ ಮತ್ತೊಮ್ಮೆ ಸಭೆ ನಡೆಸಲಿದೆ ಎಂದು ಮೂಲಗಳು ಹೇಳಿವೆ.
ಸರಕಾರಿ ಸೇವೆಗೆ ರಾಜೀನಾಮೆ ನೀಡಿ ಹೊರನಡೆದಿರುವ ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಹಾಗೂ ರಾಕೇಶ್ ಆಸ್ಥಾನ ಅವರ ಆಂತರಿಕ ಕಿತ್ತಾಟದ ಬಳಿಕ ಸರಕಾರ ಎಂ.ನಾಗೇಶ್ವರ ರಾವ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಿದೆಯಾದರೂ ಇದುವರೆಗೂ ಪೂರ್ಣಾವಧಿಯ ಮುಖ್ಯಸ್ಥರನ್ನು ನೇಮಿಸಿಲ್ಲ. ಪ್ರಧಾನಿ ಮೋದಿ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಆಯ್ಕೆ ಸಮಿತಿ ಜನವರಿ 24ರಂದು ಸಭೆ ನಡೆಸಿತ್ತಾದರೂ ಯಾವುದೇ ತೀರ್ಮಾನಕ್ಕೆ ಬರುವಲ್ಲಿ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸಲಿದೆ ಎಂದು ಮೂಲಗಳು ಹೇಳಿವೆ.
11 ಅಧಿಕಾರಿಗಳ ಅಂತಿಮಪಟ್ಟಿ: ಈ ಮಧ್ಯೆ ಕೇಂದ್ರ ಸರಕಾರ 1983ನೇ ಸಾಲಿನ ಮಧ್ಯಪ್ರದೇಶ ಕೇಡರ್ನ ರಿನಾ ಮಿತ್ರಾ ಸೇರಿದಂತೆ 11 ಐಪಿಎಸ್ ಅಧಿಕಾರಿಗಳ ಅಂತಿಮಪಟ್ಟಿ ಸಿದ್ಧಪಡಿಸಿದೆ. ಇದರಲ್ಲಿ ಆಯ್ಕೆ ಸಮಿತಿ ಯಾರನ್ನು ಆಯ್ಕೆ ಮಾಡಲಿದೆ ಎಂಬುದು ಶುಕ್ರವಾರ ಸ್ಪಷ್ಟಗೊಳ್ಳುವ ಸಾಧ್ಯತೆಗಳಿವೆ.
ಸರಕಾರಿ ಸೇವೆಗೆ ರಾಜೀನಾಮೆ ನೀಡಿ ಹೊರನಡೆದಿರುವ ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಹಾಗೂ ರಾಕೇಶ್ ಆಸ್ಥಾನ ಅವರ ಆಂತರಿಕ ಕಿತ್ತಾಟದ ಬಳಿಕ ಸರಕಾರ ಎಂ.ನಾಗೇಶ್ವರ ರಾವ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಿದೆಯಾದರೂ ಇದುವರೆಗೂ ಪೂರ್ಣಾವಧಿಯ ಮುಖ್ಯಸ್ಥರನ್ನು ನೇಮಿಸಿಲ್ಲ. ಪ್ರಧಾನಿ ಮೋದಿ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಆಯ್ಕೆ ಸಮಿತಿ ಜನವರಿ 24ರಂದು ಸಭೆ ನಡೆಸಿತ್ತಾದರೂ ಯಾವುದೇ ತೀರ್ಮಾನಕ್ಕೆ ಬರುವಲ್ಲಿ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸಲಿದೆ ಎಂದು ಮೂಲಗಳು ಹೇಳಿವೆ.
11 ಅಧಿಕಾರಿಗಳ ಅಂತಿಮಪಟ್ಟಿ: ಈ ಮಧ್ಯೆ ಕೇಂದ್ರ ಸರಕಾರ 1983ನೇ ಸಾಲಿನ ಮಧ್ಯಪ್ರದೇಶ ಕೇಡರ್ನ ರಿನಾ ಮಿತ್ರಾ ಸೇರಿದಂತೆ 11 ಐಪಿಎಸ್ ಅಧಿಕಾರಿಗಳ ಅಂತಿಮಪಟ್ಟಿ ಸಿದ್ಧಪಡಿಸಿದೆ. ಇದರಲ್ಲಿ ಆಯ್ಕೆ ಸಮಿತಿ ಯಾರನ್ನು ಆಯ್ಕೆ ಮಾಡಲಿದೆ ಎಂಬುದು ಶುಕ್ರವಾರ ಸ್ಪಷ್ಟಗೊಳ್ಳುವ ಸಾಧ್ಯತೆಗಳಿವೆ.