ಆ್ಯಪ್ನಗರ

ಜಮ್ಮು ಕಾಶ್ಮೀರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿದ ಪ್ರಧಾನಿ ಮೋದಿ

ಮೂವರು ಬಿಜೆಪಿ ನಾಯಕರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರು, ಮೂವರನ್ನೂ ಬಲಿ ಪಡೆದು ಸ್ಥಳದಿಂದ ಪರಾರಿಯಾಗಿದ್ದರು. ಸದ್ಯ ಈ ಪ್ರಕರಣ ಜಮ್ಮುಕಾಶ್ಮೀರದಲ್ಲಿ ಪ್ರತಿಭಟನಾ ಸ್ವರೂಪವನ್ನು ಪಡೆದಿದ್ದು, ಪ್ರಧಾನಿ ಮೋದಿ ಸೇರಿದಂತೆ ಅನೇಕ ರಾಜಕೀಯ ನಾಯಕರು ಉಗ್ರರ ಕೃತ್ಯವನ್ನು ಖಂಡಿಸಿದ್ಧಾರೆ.

Vijaya Karnataka Web 30 Oct 2020, 12:21 pm
ಹೊಸದಿಲ್ಲಿ: ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ವೈಕೆ ಪೊರಾ ಬಳಿ ಕಾರಿನಲ್ಲಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ಫಿದಾ ಹುಸೇನ್ ಯಾಟೂ, ಉಮರ್ ರಷಿದ್ ಹಾಗೂ ರಮ್ಜಾನ್ ಹಜಮ್ ಎಂಬುವವರ ಮೇಲೆ ಭಯೋತ್ಪಾದಕರು ಗುಂಡಿಟ್ಟು ಕೊಲೆಗೈದಿರುವುದನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.
Vijaya Karnataka Web modi
File photo


ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಎನ್‌ಕೌಂಟರ್‌ನಲ್ಲಿ ಮಹಿಳಾ ನಕ್ಸಲ್‌ ಹತ್ಯೆ

ಈ ಕುರಿತು ಟ್ವೀಟ್ ಮಾಡಿರುವ ಪಿಎಂ ಮೋದಿ, ಮೂವರು ಯುವ ಕಾರ್ಯಕರ್ತರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಇವರು ಜಮ್ಮು ಕಾಶ್ಮೀರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದ ಯುವಕರು. ಮೃತರ ಕುಟುಂಬಸ್ಥರಿಗೆ ದುಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಮೃತ ಮೂವರು ಯುವಕರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಕಣಿವೆಯಲ್ಲಿ ಉಗ್ರರ ಗುಂಡಿಗೆ ಮೂವರು ಬಿಜೆಪಿ ನಾಯಕರು ಬಲಿ: ಕುಲ್ಗಾಮ್ ಸ್ತಬ್ಧ!

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡಿಗೆ ಮೂವರು ಯುವ ಬಿಜೆಪಿ ನಾಯಕರು ನಿನ್ನೆ ಬಲಿಯಾಗಿದ್ದರು. ಇಲ್ಲಿನ ಕುಲ್ಗಾಮ್ ಜಿಲ್ಲೆಯ ವೈಕೆ ಪೊರಾ ಬಳಿ ಕಾರಿನಲ್ಲಿ ಬರುತ್ತಿದ್ದ ಬಿಜೆಪಿ ನಾಯಕರಾದ ಫಿದಾ ಹುಸೇನ್ ಯಾಟೂ, ಉಮರ್ ರಷಿದ್ ಹಾಗೂ ರಮ್ಜಾನ್ ಹಜಮ್ ಎಂಬುವವರ ಮೇಲೆ ಭಯೋತ್ಪಾದಕರು ಗುಂಡಿನ ಮಳೆಗರೆದಿದ್ದಾರೆ.

ಫ್ರಾನ್ಸ್ ಭಯೋತ್ಪಾದಕ ದಾಳಿ ಖಂಡಿಸಿದ ಪ್ರಧಾನಿ: ಉಗ್ರವಾದದ ವಿರುದ್ಧ ಜಂಟಿ ಹೋರಾಟಕ್ಕೆ ಕರೆ!

ಈ ಮೂವರೂ ಬಿಜೆಪಿ ನಾಯಕರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರು, ಮೂವರನ್ನೂ ಬಲಿ ಪಡೆದು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾರಿನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೂವರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗ ಮಧ್ಯೆಯೇ ಮೂವರೂ ನಾಯಕರು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ