ಆ್ಯಪ್ನಗರ

ಪಕ್ಷ ಅಸಾಧಾರಣ ಕಾರ್ಯಕರ್ತನನ್ನು ಕಳೆದುಕೊಂಡಿದೆ: ಸುರೇಶ್ ಅಂಗಡಿ ನಿಧನಕ್ಕೆ ಮೋದಿ ಕಂಬನಿ!

ಸುರೇಶ್ ಅಂಗಡಿ ನಿಧನಕ್ಕೆ ಕಂಬನಿ ಮಿಡಿದಿರುವ ಪ್ರಧಾನಿ ಮೋದಿ, ಪಕ್ಷ ಓರ್ವ ಅಸಾಧಾರಣ ಕಾರ್ಯಕರ್ತನನ್ನು ಕಳೆದುಕೊಂಡಿದೆ ಎಂದು ದು:ಖ ವ್ಯಕ್ತಪಡಿಸಿದ್ದಾರೆ. ಓರ್ವ ಸಮರ್ಪಿತ ಸಂಸದ ಹಾಗೂ ಪರಿಣಾಮಕಾರಿ ಸಚಿವರನ್ನು ಕಳೆದುಕೊಂಡಿದ್ದಕ್ಕೆ ತೀವ್ರ ದು:ಖವಾಗಿದೆ ಎಂದು ಮೋದಿ ಕಂಬನಿ ಮಿಡಿದಿದ್ದಾರೆ.

Vijaya Karnataka Web 23 Sep 2020, 10:03 pm
ನವದೆಹಲಿ: ಮಾರಕ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ಕೇಂದ್ರ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ ನಿಧನರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸುರೇಶ್ ಅಂಗಡಿ ಕೊನೆಯುಸಿರೆಳೆದಿದ್ದಾರೆ.
Vijaya Karnataka Web PM Modi
ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ


ಇನ್ನು ಸುರೇಶ್ ಅಂಗಡಿ ನಿಧನಕ್ಕೆ ಸಂತಾಪಗಳ ಮಹಾಪೂರವೇ ಹರಿದು ಬರುತ್ತಿದ್ದು, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸುರೇಶ್ ಅಂಗಡಿ ಅವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.


ಅದರಂತೆ ಸುರೇಶ್ ಅಂಗಡಿ ನಿಧನಕ್ಕೆ ಕಂಬನಿ ಮಿಡಿದಿರುವ ಪ್ರಧಾನಿ ಮೋದಿ, ಪಕ್ಷ ಓರ್ವ ಅಸಾಧಾರಣ ಕಾರ್ಯಕರ್ತನನ್ನು ಕಳೆದುಕೊಂಡಿದೆ ಎಂದು ದು:ಖ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸೋಂಕಿತ ಕೇಂದ್ರ ಸಚಿವ ಸುರೇಶ್‌ ಅಂಗಡಿ ಇನ್ನಿಲ್ಲ: ದಿಲ್ಲಿ ಏಮ್ಸ್‌ನಲ್ಲಿ ವಿಧಿವಶ


ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲು ಶ್ರಮಿಸಿದ್ದ ಸುರೇಶ್ ಅಂಗಡಿ ಅವರನ್ನು ಕಳೆದುಕೊಂಡಿರುವುದು ಅತ್ಯಂತ ದು:ಖಕರ ಸಂಗತಿ ಎಂದು ಕಂಬನಿ ಮಿಡಿದಿದ್ದಾರೆ.

ಓರ್ವ ಸಮರ್ಪಿತ ಸಂಸದ ಹಾಗೂ ಪರಿಣಾಮಕಾರಿ ಸಚಿವರಾಗಿದ್ದ ಸುರೇಶ್ ಅಂಗಡಿ, ತಮ್ಮ ಇಲಾಖೆಯ ಜವಾಬ್ದಾರಿಗಳನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸುತ್ತಿದ್ದರು ಎಂದು ಪ್ರಧಾನಿ ಮೋದಿ ನುಡಿದಿದ್ದಾರೆ.

ಈ ದು:ಖದ ಘಳಿಗೆಯಲ್ಲಿ ಸುರೇಶ್ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಲು ಬಯಸುವುದಾಗಿ ಹೇಳಿರುವ ಪ್ರಧಾನಿ, ಭಗವಂತ ಸುರೇಶ್ ಅಂಗಡಿ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ವರ್ಗಮತ್ತು ಸ್ನೇಹಿತರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ