ಆ್ಯಪ್ನಗರ

ಪ್ರಧಾನಿ ಮೋದಿಯನ್ನು ಹೊಗಳಿದ ಶತ್ರುಘ್ನ ಸಿನ್ಹಾ

ಸದಾ ತೆಗಳುತ್ತಿದ್ದ ಸಿನ್ಹಾ ಮತ್ತೆ ಹೊಗಳುತ್ತಿದ್ದಾರೆ. ಇದರ ಹಿಂದಿನ ಮರ್ಮವೇನು?

Vijaya Karnataka 19 Aug 2019, 9:32 am
ಹೊಸದಿಲ್ಲಿ: ಬಿಜೆಪಿಯಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸರಕಾರದ ನಡೆಯನ್ನು ಟೀಕಿಸುತ್ತಲೇ ಬಂದ ಕಾಂಗ್ರೆಸ್‌ ನಾಯಕ ಶತ್ರುಘ್ನ ಸಿನ್ಹಾ ಈಗ ಇದ್ದಕ್ಕಿದ್ದಂತೆ ಪ್ರಧಾನಿಯನ್ನು ಹೊಗಳಿದ್ದಾರೆ.
Vijaya Karnataka Web shatrughan sinha


''ಸ್ವಾತಂತ್ರ್ಯೋತ್ಸವ ದಿನದಂದು ಐತಿಹಾಸಿಕ ಕೆಂಪುಕೋಟೆಯಿಂದ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣ ಅತ್ಯಂತ ಪ್ರಖರ ಹಾಗೂ ದೂರದೃಷ್ಟಿಯಿಂದ ಕೂಡಿತ್ತು. ಅವರ ಮಾತುಗಳು ಸ್ಫೂರ್ತಿದಾಯಕ ಹಾಗೂ ಚಿಂತನೆಗೆ ಹಚ್ಚುವಂತಿದ್ದವು. ದೇಶವು ಎದುರಿಸುತ್ತಿರುವ ಸಮಸ್ಯೆಗಳನ್ನು ಅದ್ಭುತವಾಗಿ ವಿವರಿಸಲಾಗಿದೆ,'' ಎಂದು ಶತ್ರುಘ್ನ ಸಿನ್ಹಾ ಟ್ವೀಟ್‌ ಮಾಡಿದ್ದಾರೆ.

ಮೋದಿ ಭಾಷಣಕ್ಕೆ ಭೇಷ್‌ ಎಂದ ಚಿದಂಬರಂ

ಕಾಂಗ್ರೆಸ್‌ನ ಮತ್ತೊಬ್ಬ ನಾಯಕ ಪಿ.ಚಿದಂಬರಂ ಸಹ ಪ್ರಧಾನಿ ಭಾಷಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರತಿಪಾದಿಸಿದ ವಿಚಾರಗಳಲ್ಲಿ ಜನಸಂಖ್ಯಾ ನಿಯಂತ್ರಣ, ಪ್ಲಾಸ್ಪಿಕ್‌ ನಿಷೇಧ ಮತ್ತು ಸಂಪತ್ತು ಸೃಷ್ಟಿಸುವವರನ್ನು ಗೌರವಿಸುವ ಪ್ರಸ್ತಾವನೆಗಳನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ಕೊಂಡಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ