ಆ್ಯಪ್ನಗರ

ಲಾಕ್‌ಡೌನ್ ಬಳಿಕದ ಸಿದ್ಧತೆಯ ಲಿಸ್ಟ್ ಕೊಡಿ: ಸಚಿವರಿಗೆ ಮೋದಿ ಹೀಗೆ ಆದೇಶಿಸಲು ಕಾರಣವೇನು?

ಕೊರೊನಾ ವೈರಸ್ ದಾಳಿಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಪ್ರಧಾನಿ ಮೋದಿ ಇಂದು ಕೇಂದ್ರ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು. ಲಾಕ್‌ಡೌನ್ ಮುಕ್ತಾಯದ ಬಳಿಕ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ವಿವರಗಳನ್ನೊಳಗೊಂಡ 10 ಪ್ರಮುಖ ಅಂಶಗಳ ಪಟ್ಟಿಯನ್ನು ತಮಗೆ ಕಳುಹಿಸುವಂತೆ ಪ್ರಧಾನಿ ಮೋದಿ ಈ ವೇಳೆ ಆದೇಶ ನೀಡಿದ್ದಾರೆ.

Vijaya Karnataka Web 6 Apr 2020, 4:46 pm
ನವದೆಹಲಿ: ಮಾರಕ ಕೊರೊನಾ ವೈರಸ್‌ನ್ನು ಈ ದೇಶದಿಂದ ಒದ್ದೊಡಿಸಲು ಪಣ ತೊಟ್ಟಿರುವ ಪ್ರಧಾನಿ ಮೋದಿ, ಒಂದಾದ ಮೇಲೊಂದರಂತೆ ನಿರಂತರ ಸಭೆಗಳ ಮೂಲಕ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ.
Vijaya Karnataka Web Video Conference
ಪ್ರಧಾನಿ ಮೋದಿ ಇಂದು ಎಲ್ಲಾ ಕೇಂದ್ರ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.


ಈಗಾಗಲೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಎರಡು ಬಾರಿ ವಿಡಿಯೋ ಕಾನ್ಫರೆನ್ಸ್ ಸಭೆಯ ಮೂಲಕ ಮಾತನಾಡಿರುವ ಪ್ರಧಾನಿ ಮೋದಿ, ಇಂದು ಕೇಂದ್ರ ಸಚಿವರುಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.


ಕೊರೊನಾ ವೈರಸ್ ವಸ್ತುಸ್ಥಿತಿ ಅಧ್ಯಯನ ಹಾಗೂ ಲಾಕ್‌ಡೌನ್ ಆದೇಶ ಮುಕ್ತಾಯವಾದ ಬಳಿಕ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು 10 ಪ್ರಮುಖ ಅಂಶಗಳ ಪಟ್ಟಿಯನ್ನು ತಮಗೆ ರವಾನಿಸುವಂತೆ ಪ್ರಧಾನಿ ಮೋದಿ ಎಲ್ಲಾ ಸಚಿವರುಗಳಿಗೆ ಆದೇಶ ನೀಡಿದ್ದಾರೆ.

ಕೊರೊನಾ ವೈರಸ್ ಆರ್ಭಟ: ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್

ಕ್ಷೇತ್ರವಾರು ಪರಿಸ್ಥಿತಿ ಹಾಗೂ ಸೂಕ್ಷ್ಮ ಪ್ರದೇಶಗಳ ವಸ್ತುಸ್ಥಿತಿಯನ್ನು ಅವಲೋಕಿಸಿ ಲಾಕ್‌ಡೌನ್ ಮುಕ್ತಾಯದ ಬಳಿಕ ಏನು ನಿರ್ಧಾರ ಕೈಗೊಳ್ಳಬೇಕು ಎಂಬುದರ ಕುರಿತು ಅಭಿಪ್ರಾಯ ತಿಳಿಸಿ ಎಂದು ಪ್ರಧಾನಿ ಮೋದಿ ಎಲ್ಲಾ ಕೇಂದ್ರ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ.

ಇದೇ ವೇಳೆ ಸಾಮಾಜಿಕ ಅಂತರ ಹಾಗೂ ಲಾಕ್‌ಡೌನ್ ಆದೇಶವನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೈಗೊಳ್ಳಲಾಗಿರುವ ಇಲಾಖಾವಾರು ಕ್ರಮಗಳ ಕುರಿತೂ ಪ್ರಧಾನಿ ಮೋದಿ ಮಾಹಿತಿ ಪಡೆದರು.

ಅಲ್ಲದೇ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕ ಕಾಯ್ದುಕೊಂಡು ಅಲ್ಲಿನ ಸ್ಥಿತಿಗತಿಗೆ ತಕ್ಕಂತೆ ಸಹಾಯಹಸ್ತ ಚಾಚುವಂತೆ ಪ್ರಧಾನಿ ಮೋದಿ ಸಚಿವರಿಗೆ ಸಲಹೆ ನೀಡಿದರು.


ಒಂದೊಂದು ರಾಜ್ಯದ್ದು ಒಂದೊಂದು ಕತೆ: ಮೋದಿ ಮುಂದೆ ಮುಖ್ಯಮಂತ್ರಿಗಳು ಬಿಚ್ಚಿಟ್ಟ ಸತ್ಯಗಳೇನು?

ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಎಲ್ಲಾ ಇಲಾಖೆಯ ಸಚಿವರು ಹಾಗೂ ರಾಜ್ಯ ಖಾತೆ ಸಚಿವರು ಭಾಗವಹಿಸಿದ್ದರು ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ