ಆ್ಯಪ್ನಗರ

ಬಿಜೆಪಿ 40ನೇ ಸಂಸ್ಥಾಪನಾ ದಿನ: ಆಚರಣೆ ಜವಾಬ್ದಾರಿಯಾಗಿ ಪರಿವರ್ತನೆಯಾಗಿದೆ ಎಂದ ಮೋದಿ

ಕೊರೊನಾ ವೈರಸ್ ಭೀತಿಯ ನಡುವಲ್ಲೇ ಆಡಳಿತಾರೂಢ ಬಿಜೆಪಿ ತನ್ನ 40ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತರ ನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದಾರೆ. ಕೋವಿಡ್-19 ಸಮರದಲ್ಲಿ ಭಾರತ ಗೆಲ್ಲುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮೋದಿ ಹುರಿದುಂಬಿಸಿದ್ದಾರೆ.

Vijaya Karnataka Web 6 Apr 2020, 5:14 pm
ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ)ತನ್ನ 40ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸುತ್ತಿದ್ದು, ಕೋವಿಡ್-19 ನೆರಳಲ್ಲಿ ಈ ಬಾರಿಯ ಆಚರಣೆ ಜವಾಬ್ದಾರಿಯಾಗಿ ಪರಿವರ್ತನೆ ಹೊಂದಿರುವುದು ವಿಶೇಷ.
Vijaya Karnataka Web modi
ಸಂಗ್ರಹ ಚಿತ್ರ


ಪಕ್ಷದ 40ನೇ ಸಂಸ್ಥಾಪನಾ ದಿನಾಚರಣೆಯ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶವನ್ನು ಕೊರೊನಾ ವೈರಸ್ ಮುಕ್ತವನ್ನಾಗಿ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದ್ದಾರೆ.


ಕೋವಿಡ್-19 ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೊರಡಿಸಿರುವ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಮನವಿ ಮಾಡಿರುವ ಪ್ರಧಾನಿ ಮೋದಿ, ಸಂಕಷ್ಟದಲ್ಲಿರುವ ಜನತೆಗೆ ಸ್ಪಂದಿಸುವ ಮೂಲಕ ಈ ಸಮರವನ್ನು ಗೆಲ್ಲಲು ಸಿದ್ಧರಾಗಬೇಕು ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ.

ದೇಶಾದ್ಯಂತ ಕೊರೊನಾ ದೀಪಾವಳಿ..! 'ದೀಪ ಅಭಿಯಾನ'ದಲ್ಲಿ ಮಿಂದೆದ್ದ ಗಣ್ಯಾತಿಗಣ್ಯರು..!

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮಹತ್ವನ್ನು ಮತ್ತೊಮ್ಮೆ ಸಾರಿ ಹೇಳಿರುವ ಪ್ರಧಾನಿ ಮೋದಿ, ಖುದ್ದು ಸಾಮಾಜಿಕ ಅಂತರವನ್ನು ಪಾಲಿಸಿ ಇತರರಿಗೂ ಪಾಲಿಸುವಂತೆ ಪ್ರೇರಣೆ ನೀಡಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.


ಇದೇ ವೇಳೆ ಪಕ್ಷದ 40ನೇ ಸಂಸ್ಥಾಪನಾ ದಿನಾಚರಣೆಯ ಭಾಗವಾಗಿ ಹಿರಿಯ ನಾಯಕರನ್ನು ಸ್ಮರಿಸಿರುವ ಪ್ರಧಾನಿ ಮೋದಿ, ಪಕ್ಷ ಬಲವರ್ಧನೆಗೆ ಹಗಲಿರುಳೂ ದುಡಿದು ತಮ್ಮ ಜೀವನವನ್ನೇ ಸಮರ್ಪಿಸಿದ ಸಮಸ್ತ ಕಾರ್ಯಕರ್ತರನ್ನು ನೆನೆದಿದ್ದಾರೆ.


ದೇಶ ಸೇವೆ ಮಾಡಲು ಬಿಜೆಪಿಗೆ ಸುವರ್ಣಾವಕಾಶ ಲಭಿಸಿದ್ದು, ಈ ಅವಕಾಶವನ್ನು ಬಳಸಿಕೊಂಡು ದೇಶಕ್ಕಾಗಿ ಎಲ್ಲರೂ ಒಟ್ಟಾಗಿ ದುಡಿಯೋಣ ಎಂದು ಪ್ರಧಾನಿ ಮೋದಿ ಈ ವೇಳೆ ಕರೆ ಕೊಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ