ಆ್ಯಪ್ನಗರ

ನವ ಬಿಹಾರ ನಿರ್ಮಾಣದಲ್ಲಿ ನಿತೀಶ್ ಕುಮಾರ್ ಪಾತ್ರ ಮಹತ್ವದ್ದು: ಮೋದಿ ಶ್ಲಾಘನೆ!

ನವ ಭಾರತ ಹಾಗೂ ನವ ಬಿಹಾರ ನಿರ್ಮಾಣದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾತ್ರ ಅತ್ಯಂತ ಮಹತ್ವದ್ದು ಎಂದು ಪ್ರಧಾನಿ ಮೋದಿ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ನಿತೀಶ್ ಕುಮಾರ್ ಅವರ ಸಮರ್ಥ ನಾಯಕತ್ವದಲ್ಲಿ ರಾಜ್ಯವು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

Vijaya Karnataka Web 13 Sep 2020, 2:31 pm
ನವದೆಹಲಿ: ನವ ಭಾರತ ಹಾಗೂ ನವ ಬಿಹಾರ ನಿರ್ಮಾಣದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾತ್ರ ಅತ್ಯಂತ ಮಹತ್ವದ್ದು ಎಂದು ಪ್ರಧಾನಿ ಮೋದಿ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.
Vijaya Karnataka Web PM Modi
ಬಿಹಾರದಲ್ಲಿ ತೈಲ ಕ್ಷೇತ್ರದ ಮೂರು ಬೃಹತ್ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ


ಅಭಿವೃದ್ಧಿ ದೃಷ್ಟಿಯಿಂದ ಬಿಹಾರ ಹಲವು ದಶಕಗಳಿಂದ ಹಿಂದುಳಿದ ರಾಜ್ಯವಾಗಿತ್ತು. ಆದರೆ ನಿತೀಶ್ ಕುಮಾರ್ ಅವರ ಸಮರ್ಥ ನಾಯಕತ್ವದಲ್ಲಿ ರಾಜ್ಯವು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಬಿಹಾರ ಚುನಾವಣೆ: ನಿತೀಶ್‌ ಕುಮಾರ್ ಅವರೇ‌ ಎನ್‌ಡಿಎ ಸಿಎಂ ಅಭ್ಯರ್ಥಿ: ಜೆ.ಪಿ.ನಡ್ಡಾ ಸ್ಪಷ್ಟನೆ

ತೈಲ ಕ್ಷೇತ್ರದ ಮೂರು ಬೃಹತ್ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ನಿತೀಶ್ ಅವರ ನೇತೃತ್ವದ ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳು ಫಲ ನೀಡಲು ಆರಂಭಿಸಿವೆ ಎಂದು ಹೇಳಿದರು.


ಒಂದು ಕಾಲದಲ್ಲಿ ಬಿಹಾರದಲ್ಲಿ ಉತ್ತಮ ರಸ್ತೆಗಳಿರಲಿಲ್ಲ. ಇಂಟರ್ನೆಟ್ ಸಂಪರ್ಕವೂ ಇರಲಿಲ್ಲ. ಆದರೆ ಇದೀಗ ಬೃಹತ್ ಯೋಜನೆಗಳನ್ನು ಪೂರ್ಣಗೊಳಿಸುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಬಿಹಾರ ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಇದಕ್ಕೆ ನಿತೀಶ್ ಕುಮಾರ್ ಅವರ ದೂರದೃಷ್ಟಿಯೇ ಕಾರಣ ಎಂದು ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದರು.

ಬಿಹಾರ ಚುನಾವಣೆ: ಮತ್ತೆ ಜೆಡಿಯು ಕಡೆ ಮುಖ ಮಾಡಿದ ಹಿರಿಯ ನಾಯಕ ಶರದ್‌ ಯಾದವ್‌..!

ಬಿಹಾರದಲ್ಲಿ ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ನಿತೀಶ್ ಕುಮಾರ್ ಅವರ ಕುರಿತಾದ ಪ್ರಧಾನಿ ಮೋದಿ ಅವರ ಮೆಚ್ಚುಗೆಯ ಮಾತುಗಳು ಕುತೂಹಲ ಕೆರಳಿಸಿದೆ.

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪ್ರಧಾನಿ ಮೋದಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ