ಆ್ಯಪ್ನಗರ

ಲಡಾಖ್ ಲಡಾಯಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯಲಿದೆ ಸರ್ವಪಕ್ಷ ಸಭೆ!

ಗಲ್ವಾನ್ ಗಡಿ ಘರ್ಷಣೆ ಕುರಿತು ಚರ್ಚಿಸಲು ಇಂದು(ಶುಕ್ರವಾರ) ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ಆದರೆ ಈ ಸಭೆಗೆ ಆರ್‌ಜೆಡಿ ಹಾಗೂ ಆಪ್ ಪಕ್ಷಕ್ಕೆ ಆಹ್ವಾನ ನೀಡದಿರುವುದು ವಿವಾದಕ್ಕೆ ಕಾರಣವಾಗಿದೆ.

Vijaya Karnataka Web 19 Jun 2020, 4:25 pm
ನವದೆಹಲಿ: ಲಡಾಖ್ ಗಡಿಯಲ್ಲಿ ಭಾರತ-ಚೀನಾ ಸೈನಿಕರ ನಡುವಿನ ಹಿಂಸಾತ್ಮಕ ಘರ್ಷಣೆ ಕುರಿತು ಚರ್ಚಿಸಲು ಇಂದು(ಶುಕ್ರವಾರ) ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ.
Vijaya Karnataka Web Ladakh 1
ಸಂಗ್ರಹ ಚಿತ್ರ


ಇಂದು ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈಗಾಗಲೇ ಎಲ್ಲಾ ಪಕ್ಷಗಳ ಉನಗನತ ನಾಯಕರಿಗೆ ಕರೆ ಮಾಡಿ ಸಭೆಗೆ ಆಹ್ವಾನಿಸಿದ್ದಾರೆ.


ಅದರಂತೆ ಇಂದಿನ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ.

ಭಾರತದ ಗಡಿಯನ್ನು ಚೀನಾ ಆಕ್ರಮಿಸಿದ್ದು ಹೇಗೆ? ಪ್ರಧಾನಿಯೇ ತಿಳಿಸಲಿ: ಸೋನಿಯಾ ಗಾಂಧಿ

ಆದರೆ ಈ ಸರ್ವಪಕ್ಷ ಸಭೆಗೆ ಆಪ್ ಹಾಗೂ ಆರ್‌ಜೆಡಿ ಪಕ್ಷಕ್ಕೆ ಆಹ್ವಾನ ನೀಡದಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಎರಡೂ ಪಕ್ಷಗಳೂ ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ.


ಗಡಿಗೆ ನಿಶ್ಯಸ್ತ್ರ ಸೈನಿಕರನ್ನು ಕಳುಹಿಸಿದ್ದು ಏಕೆ? ಇದಕ್ಕೆಲ್ಲಾ ಜವಾಬ್ದಾರಿ ಯಾರು?: ರಾಹುಲ್‌ ಪ್ರಶ್ನೆ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪಕ್ಷ ಬಿಹಾರದಲ್ಲಿ ಅತ್ಯಂತ ದೊಡ್ಡ ಪಕ್ಷವಾಗಿದೆ ಹಾಗೂ ಸಂಸತ್ತಿನಲ್ಲಿ ಐದು ಸದಸ್ಯರನ್ನು ಹೊಂದಿದೆ ಅದಾಗ್ಯೂ ಇಂದಿನ ಸರ್ವಪಕ್ಷ ಸಭೆಗೆ ಪಕ್ಷವನ್ನು ಆಹ್ವಾನಿಸದಿರುವುದಕ್ಕೆ ಕಾರಣ ಹೇಳಬೇಕು ಎಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ