ಆ್ಯಪ್ನಗರ

ಕೊರೊನಾ ನೆರಳಲ್ಲಿ ಪ್ರಧಾನಿ ಮೋದಿ ಯುಗಾದಿ ಶುಭಾಶಯದ ಟ್ವೀಟ್ ಹೀಗಿತ್ತು

ಕೊರೊನಾ ವೈರಸ್ ಭೀತಿಯ ನಡುವೆಯೇ ಇಡೀ ದೇಶ ಇಂದು ಯುಗಾದಿ ಹಬ್ಬವನ್ನು ಆಚರಿಸುತ್ತಿದೆ. 21 ದಿನಗಳ ಲಾಕ್‌ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಜನತೆ, ಮನೆಯಲ್ಲೇ ಯುಗಾದಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮತ್ತಷ್ಟು ಒಗ್ಗಟ್ಟು ಪ್ರದರ್ಶನ ತೋರುವಂತೆ ಮನವಿ ಮಾಡಿದ್ದಾರೆ.

Vijaya Karnataka Web 25 Mar 2020, 10:31 am
ನವದೆಹಲಿ: ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಇಡೀ ದೇಶವನ್ನು 21 ದಿನಗಳ ಕಾಲ ಲಾಕ್‌ಡೌನ್ ಮಾಡಲಾಗಿದ್ದು, ಶ್ರೀ ಶಾರ್ವರಿ ನಾಮ ಸಂವತ್ಸರದ ಯುಗಾದಿ ಹಬ್ಬವನ್ನು ಜನ ಮನೆಯಲ್ಲೇ ಆಚರಿಸುವ ಮೂಲಕ ಲಾಕ್‌ಡೌನ್‌ಗೆ ಬೆಂಬಲ ನೀಡಿದ್ದಾರೆ.
Vijaya Karnataka Web MODI
ಕೊರೊನಾ ವೈರಸ್ ಭೀತಿಯ ನಡುವೆಯೇ ಇಡೀ ದೇಶ ಇಂದು ಯುಗಾದಿ ಹಬ್ಬ ಆಚರಿಸುತ್ತಿದ್ದು, ಪ್ರಧಾನಿ ಮೋದಿ ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.


ಈ ಮಧ್ಯೆ ಯುಗಾದಿ ಹಬ್ಬದ ಪ್ರಯುಕ್ತ ದೇಶದ ಜನತೆಗೆ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ನಮ್ಮ ಒಗ್ಗಟ್ಟು ಹೀಗೆ ಮುಂದುವರೆಯಲಿ ಎಂದು ಆಶಿಸಿದ್ದಾರೆ.

ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಎಂದು ಟ್ವೀಟ್ ಮಾಡಿರುವ ಪ್ರಧಾನಿ, ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಅತ್ಯಂತ ಎಚ್ಚರಿಕೆಯಿಂದ ಯುಗಾದಿ ಹಬ್ಬವನ್ನು ಆಚರಿಸುವಂತೆ ಮನವಿ ಮಾಡಿದ್ದಾರೆ.


ಯುಗಾದಿ ವಿಶೇಷ : ಈ ಬಾರಿ ಮನೆಯಲ್ಲೇ ಸಿಂಪಲ್ಲಾಗಿ ಹಬ್ಬ ಆಚರಿಸಿ

ದೇಶ ಈಗ ಸಂದಿಗ್ಧ ಪರಿಸ್ಥಿತಿಯಲ್ಲಿದ್ದು, ಕೊರೊನಾ ವೈರಸ್ ಎಂಬ ಮಹಾಮಾರಿ ವಿರುದ್ಧ ಸಮರ ಸಾರಿದೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನಾವೆಲ್ಲರೂ ಮತ್ತಷ್ಟು ಒಗ್ಗಟ್ಟು ಪ್ರದರ್ಶನ ತೋರುವ ಅವಶ್ಯಕತೆ ಇದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ನಾವೆಲ್ಲರೂ ಒಂದಾಗಿ ಕೊರೊನಾ ವೈರಸ್ ಎಂಬ ಮಹಾಮಾರಿಯನ್ನು ಸೋಲಿಸೋಣ ಎಂದು ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರತಿಜ್ಞೆ ಮಾಡೋಣ ಎಂದು ಪ್ರಧಾನಿ ಮೋದಿ ಈ ವೇಳೆ ಕರೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ