ಆ್ಯಪ್ನಗರ

ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದೇ ರಾಜಕೀಯ ಲಾಭಕ್ಕಾಗಿ: ರಾಹುಲ್ ಗಾಂಧಿ

ಹಿಂದುತ್ವದ ಬಗ್ಗೆ ಪ್ರಧಾನಿ ಮೋದಿಯವರ ನಿಲುವನ್ನು ಪ್ರಶ್ನಿಸಿರುವ ರಾಹುಲ್ ಗಾಂಧಿ, ಹಿಂದುತ್ವದ ಮೂಲವನ್ನು ಅರ್ಥಮಾಡಿಕೊಳ್ಳದಿರುವ ಪ್ರಧಾನಿ ನರೇಂದ್ರ ಮೋದಿ ಯಾವ ರೀತಿಯ ಹಿಂದು ಪ್ರಶ್ನಿಸಿದ್ದಾರೆ.

Vijaya Karnataka Web 1 Dec 2018, 12:47 pm
ಜೈಪುರ: ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನ ವಿರುದ್ಧ ಸರ್ಜಿಕಲ್ ದಾಳಿ ನಡೆಸಿದ್ದು ರಾಜಕೀಯ ಲಾಭಕ್ಕಾಗಿ. ಸೇನೆಯನ್ನು ರಾಜಕೀಯಕ್ಕಾಗಿ ಬಿಜೆಪಿ ಬಳಸಿಕೊಂಡಿತು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Vijaya Karnataka Web Rahul Gandhi


ರಾಜಸ್ಥಾನದ ಮೇವಾರದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 3 ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದರು. ಆದರೆ ಎಲ್ಲಿಯೂ ಆ ಬಗ್ಗೆ ಯುಪಿಎ ಹೇಳಿಕೊಂಡಿರಲಿಲ್ಲ. ಸೇನೆಗೆ ಅದರ ಬಗ್ಗೆ ಹೇಳಿಕೊಳ್ಳಬೇಕಾಗಿರಲಿಲ್ಲ. ಆದರೆ ಪ್ರಧಾನಿ ಮೋದಿ ಮಾತ್ರ ಸರ್ಜಿಕಲ್ ದಾಳಿ ಕುರಿತು ಹೇಳಿಕೆ ನೀಡಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜಸ್ಥಾನ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು, ಪ್ರಚಾರ ರ‍್ಯಾಲಿಗೆ ತೆರಳಿರುವ ರಾಹುಲ್ ಅಲ್ಲಿ ದೇಗುಲ ಮತ್ತು ದರ್ಗಾಗೆ ಭೇಟಿ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಹಿಂದುತ್ವದ ಬಗ್ಗೆ ಪ್ರಧಾನಿ ಮೋದಿಯವರ ನಿಲುವನ್ನು ಪ್ರಶ್ನಿಸಿರುವ ರಾಹುಲ್ ಗಾಂಧಿ, ಹಿಂದುತ್ವದ ಮೂಲವನ್ನು ಅರ್ಥಮಾಡಿಕೊಳ್ಳದಿರುವ ಪ್ರಧಾನಿ ನರೇಂದ್ರ ಮೋದಿ ಯಾವ ರೀತಿಯ ಹಿಂದು ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ