ಆ್ಯಪ್ನಗರ

'ಸತಿ' ನಿಷೇಧಿಸಿದ್ದೇವೆಂದ ಮೇಲೆ ತ್ರಿವಳಿ ತಲಾಖ್‌ ಕೂಡ ನಿಷೇಧಿಸಲೇಬೇಕು: ಪಿಎಂ ಮೋದಿ

ಸಾಮಾಜಿಕ ಪಿಡುಗುಗಳಲ್ಲಿ ಒಂದಾಗಿದ್ದ ಸತಿ ಪದ್ಧತಿ ನಿರ್ಮೂಲನೆ ಬಗ್ಗೆ ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರಿಗೆ ಉತ್ತಮ ಜೀವನ ಕಲ್ಪಿಸುವ ದೃಷ್ಟಿಯಿಂದ ತ್ರಿವಳಿ ತಲಾಖ್‌ ಕೂಡ ನಿಷೇಧಿಸಬೇಕು ಎಂದರು.

Vijaya Karnataka Web 15 Aug 2019, 4:48 pm
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ 73ನೇ ಭಾರತ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭ ದಿಲ್ಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತ ತ್ರಿವಳಿ ತಾಲಾಖ್‌ ನಿಷೇಧದ ಪ್ರಾಮುಖ್ಯತೆಯನ್ನು ವಿವರಿಸಿದರು.

ಸಾಮಾಜಿಕ ಪಿಡುಗಾಗಿದ್ದ ತ್ರಿವಳಿ ತಲಾಖ್‌ ಅನ್ನು ನಿಷೇಧಿಸಿದ ಕ್ರಮವನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ, ಸತಿ ಪದ್ಧತಿ, ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ ವಿರುದ್ಧ ಹೆಜ್ಜೆಗಳನ್ನು ಇಡುತ್ತೇವೆ ಎಂದ ಮೇಲೆ ತ್ರಿವಳಿ ತಲಾಖ್‌ ವಿರುದ್ಧ ಯಾಕೆ ಸಾಧ್ಯವಿಲ್ಲ? ತ್ರಿವಳಿ ತಲಾಖ್‌ ನಿಷೇಧದ ಕ್ರಮದಿಂದ ಮುಸ್ಲಿಂ ಮಹಿಳೆಯರು ಹೆಚ್ಚು ಉತ್ತಮ ಜೀವನ ಹೊಂದುತ್ತಾರೆ. ಈ ನಿರ್ಧಾರವನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು. ಜನತೆ ಎದಿರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ದೃಷ್ಟಿಯಿಂದ ನೋಡಬೇಕು ಎಂದು ಪಿಎಂ ಮೋದಿ ವಿವರಿಸಿದ್ದಾರೆ.

ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ? ಈ ಬಗ್ಗೆ ಭಾಷಣದಲ್ಲಿ ಮೋದಿ ಹೇಳಿದ್ದೇನು?

ಹೌದು, ಇಂತಹ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವಾಗ ಸಾಕಷ್ಟು ಅಡೆತಡೆಗಳು ಉಂಟಾಗುತ್ತವೆ. ಆದರೆ ನಾವು ಅವುಗಳನ್ನು ಹಿಮ್ಮೆಟ್ಟಿಸಿ ಸಮಾಜವನ್ನು ಸಮಸ್ಯೆಗಳಿಂದ ಮುಕ್ತಗೊಳಿಸಬೇಕು. ತ್ರಿವಳಿ ತಲಾಖ್‌ನಿಂದಾಗಿ ಮುಸ್ಲಿಂ ಮಹಿಳೆಯರು ಎಷ್ಟು ಭಯಭೀತರಾಗಿ ಬದುಕುತ್ತಿದ್ದರು ಎಂಬುದನ್ನು ಸ್ಮರಿಸಿಕೊಳ್ಳಿ. ನಾವು ಈ ಪದ್ಧತಿಯನ್ನು ಅಂತ್ಯಗೊಳಿಸಿದ್ದೇವೆ ಎಂದು ನರೇಂದ್ರ ಮೋದಿ ಹೇಳಿದರು.

'ಸತಿ' ನಿಷೇಧಿಸಿದ್ದೇವೆಂದ ಮೇಲೆ ತ್ರಿವಳಿ ತಲಾಖ್‌ ಕೂಡ ನಿಷೇಧಿಸಲೇಬೇಕು: ಮೋದಿ (ವೀಡಿಯೋ ನೋಡಿ)

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ