ಆ್ಯಪ್ನಗರ

ವಿಕಾಸ್ ದುಬೆ ಜೊತೆ ಉರುಳಿ ಬಿದ್ದ ಕಾರಿನಲ್ಲಿದ್ದ ಪೊಲೀಸ್‌ ಪೇದೆಗೆ ಕೊರೊನಾ ಸೋಂಕು!

ರೌಡಿ ವಿಕಾಸ್ ದುಬೆ ಎನ್‌ಕೌಂಟರ್‌ ಸಂದರ್ಭದಲ್ಲಿ ಪಲ್ಟಿಯಾಗಿದ್ದ ಕಾರಿನಲ್ಲಿದ್ದ ಪೊಲೀಸ್ ಪೇದೆಯೋರ್ವನಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿದೆ. ಇನ್ನು ಪಲ್ಟಿಯಾಗಿದ್ದ ಅದೇ ಕಾರಿನಲ್ಲಿದ್ದ ಇತರ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಕೊರೊನಾ ಪರೀಕ್ಷೆಗೆ ಗುರಿಪಡಿಸಲಾಗಿದ್ದು, ಎಲ್ಲರಲ್ಲೂ ನೆಗೆಟಿವ್ ಫಲಿತಾಂಶ ಬಂದಿದೆ

Vijaya Karnataka Web 12 Jul 2020, 2:42 pm
ಕಾನ್ಪುರ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ರೌಡಿ ವಿಕಾಸ್ ದುಬೆ ಎನ್‌ಕೌಂಟರ್‌ ಸಂದರ್ಭದಲ್ಲಿ ಪಲ್ಟಿಯಾಗಿದ್ದ ಕಾರಿನಲ್ಲಿದ್ದ ಪೊಲೀಸ್ ಪೇದೆಯೋರ್ವನಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿದೆ.
Vijaya Karnataka Web Dubey 1
ಸಂಗ್ರಹ ಚಿತ್ರ


ರೌಡಿ ವಿಕಾಸ್ ದುಬೆನನ್ನು ಮಧ್ಯಪ್ರದೇಶದ ಉಜ್ಜಯಿನಿಯಿಂದ ಉತ್ತರಪ್ರದೇಶದ ಕಾನ್ಪುರ್‌ಗೆ ಕರೆತರುವ ಸಂದರ್ಭದಲ್ಲಿ ಆತನಿದ್ದ ಕಾರು ಪಲ್ಟಿಯಾಗಿತ್ತು. ಇದೇ ಅವಕಾಶವನ್ನು ಬಳಸಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದ ದುಬೆನನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಲಾಗಿತ್ತು.

ಪಾತಕಿ ವಿಕಾಸ್‌ ದುಬೆ ಪೊಲೀಸ್‌ ಎನ್‌ಕೌಂಟರ್‌ಗೆ ಬಲಿ!

ಆದರೆ ಇದೀಗ ದುಬೆ ಜೊತೆಗೆ ಕಾರಿನಲ್ಲಿದ್ದ ಪೊಲೀಸ್ ಪೇದೆಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇನ್ನು ಪಲ್ಟಿಯಾಗಿದ್ದ ಅದೇ ಕಾರಿನಲ್ಲಿದ್ದ ಇತರ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಕೊರೊನಾ ಪರೀಕ್ಷೆಗೆ ಗುರಿಪಡಿಸಲಾಗಿದ್ದು, ಎಲ್ಲರಲ್ಲೂ ನೆಗೆಟಿವ್ ಫಲಿತಾಂಶ ಬಂದಿದೆ ಎಂದು ಗಣೇಶ್ ಶಂಕರ್ ವಿದ್ಯಾರ್ಥಿ ಮೆಡಿಕಲ್ ಕಾಲೇಜಿನ ವೈದ್ಯರು ಮಾಹಿತಿ ನೀಡಿದ್ದಾರೆ.

ನಾನು ವಿಕಾಸ್ ದುಬೆ ಎನ್ನುತ್ತಿದ್ದಂತೇ ಎರಡು ಬಿಟ್ಟ ಪೊಲೀಸರು: ಖಾಕಿ ಏಟಿಗೆ ರೌಡಿ ತಬ್ಬಿಬ್ಬು!

ರೌಡಿ ವಿಕಾಸ್ ದುಬೆ ಎನ್‌ಕೌಂಟರ್ ಇಡೀ ದೇಶದ ಗಮನ ಸೆಳೆದಿದ್ದು, ಕಾನ್ಪುರ್ ಎನ್‌ಕೌಂಟರ್‌ನಲ್ಲಿ 8 ಜನ ಪೊಲೀಸರನ್ನು ಕೊಂದು ಹಾಕಿದ್ದ ಕುಖ್ಯಾತ ರೌಡಿಯನ್ನು ಎನ್‌ಕೌಂಟರ್‌ನಲ್ಲಿಹೊಡೆದುರುಳಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ