ಆ್ಯಪ್ನಗರ

ಉಗ್ರರ ಗುಂಡಿಗೆ ರಾಜಕೀಯ ಕಾರ್ಯಕರ್ತ ಬಲಿ

ಉಗ್ರರು ನಡೆಸಿದ ಗುಂಡಿನ ದಾಳಿಗೆ ರಾಜಕೀಯ ಕಾರ್ಯಕರ್ತ ಬಲಿ

TOI.in 25 Apr 2018, 7:23 pm
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಬುಧವಾರ ಉಗ್ರರು ನಡೆಸಿದ ಗುಂಡಿನ ದಾಳಿಗೆ ರಾಜಕೀಯ ಕಾರ್ಯಕರ್ತನೊಬ್ಬ ಬಲಿಯಾಗಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
Vijaya Karnataka Web political activist killed by terrorists
ಉಗ್ರರ ಗುಂಡಿಗೆ ರಾಜಕೀಯ ಕಾರ್ಯಕರ್ತ ಬಲಿ


ಪುಲ್ವಾಮದ ರಾಜ್‌ಪೊರ ಚೌಕ್‌ನಲ್ಲಿ ಉಗ್ರರು ಗುಂಡು ಹಾರಾಟ ನಡೆಸಿದ್ದು, ಮೂವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಗಾಯಗೊಂಡಿದ್ದ ರಾಜಕೀಯ ಕಾರ್ಯಕರ್ತ ಶಾದಿಮಾರ್ಗ್‌ ಪ್ರದೇಶದ ನಿವಾಸಿ ಗುಲಾಂ ನಬಿ ಪಟೇಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡ ಪೊಲೀಸರ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪರಾರಿಯಾಗಿರುವ ಉಗ್ರರಿಗಾಗಿ ಭದ್ರತಾ ಪಡೆಗಳು ಶೋಧ ನಡೆಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ