ಆ್ಯಪ್ನಗರ

ಮಾಜಿ ರಾಷ್ಟ್ರಪತಿ ಆರೋಗ್ಯದಲ್ಲಿ ಕೊಂಚ ಚೇತರಿಕೆ; ಚಿಕಿತ್ಸೆಗೆ ಸ್ಪಂದಿಸುತ್ತಿರುವ ಪ್ರಣಬ್‌ ಮುಖರ್ಜಿ

ಕಳೆದೊಂದಿಷ್ಟು ದಿನಗಳಿಂದ ಗಂಭೀರವಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮೊದಲಿಗಿಂತ ಉತ್ತಮ ಹಾಗೂ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪ್ರಣಬ್‌ ಅವರ ಪುತ್ರ ಅಭಿಜಿತ್‌ ಮುಖರ್ಜಿ ಹೇಳಿದ್ದಾರೆ.

Agencies 16 Aug 2020, 4:58 pm
ಹೊಸದಿಲ್ಲಿ: ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮೊದಲಿಗಿಂತ ಉತ್ತಮ ಹಾಗೂ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪ್ರಣಬ್‌ ಅವರ ಪುತ್ರ ಹಾಗೂ ಕಾಂಗ್ರೆಸ್‌ ನಾಯಕ ಅಭಿಜಿತ್‌ ಮುಖರ್ಜಿ ಹೇಳಿದ್ದಾರೆ. ಭಾನುವಾರ ಬೆಳಗ್ಗೆ ಟ್ವೀಟ್‌ ಮಾಡಿರುವ ಮುಖರ್ಜಿ ಮಾಜಿ ರಾಷ್ಟ್ರಪತಿ ಅವರ ಆರೋಗ್ಯದ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ.
Vijaya Karnataka Web pranab mukherjee son abhijit mukherjee tweets he is much better responding to treatment
ಮಾಜಿ ರಾಷ್ಟ್ರಪತಿ ಆರೋಗ್ಯದಲ್ಲಿ ಕೊಂಚ ಚೇತರಿಕೆ; ಚಿಕಿತ್ಸೆಗೆ ಸ್ಪಂದಿಸುತ್ತಿರುವ ಪ್ರಣಬ್‌ ಮುಖರ್ಜಿ


ಅಭಿಜಿತ್‌ ಅವರ ತಮ್ಮ ಟ್ವೀಟ್‌ನಲ್ಲಿ ತಮ್ಮ ತಂದೆ ಶೀಘ್ರದಲ್ಲಿಯೇ ಮರಳಿ ಬರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶನಿವಾರ ಆಸ್ಪತ್ರೆಯಲ್ಲಿ ತಂದೆಯವರನ್ನು ಭೇಟಿಯಾಗಿ ಬಂದಿದ್ದೇನೆ. ದೇವರ ದಯೆ ಹಾಗೂ ನಿಮ್ಮೆಲ್ಲರ ಹಾರೈಕೆಯಿಂದ ಸದ್ಯ ಉತ್ತಮ ಸ್ಥಿತಿಯಲ್ಲಿದ್ದು, ಹಿಂದಿನ ದಿನಗಳಿಗಿಂತಲೂ ಸ್ಥಿರವಾಗಿದ್ದಾರೆ ಎಂದು ಹೇಳಿದ್ದಾರೆ.


ಇನ್ನು, ಎಲ್ಲ ಅಂಗಗಳು ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಆದ್ದರಿಂದ ಶೀಘ್ರ ನಮ್ಮ ಜೊತೆಗಿನ ಜೀವನಕ್ಕೆ ಅವರು ಮರಳಲಿದ್ದಾರೆ ಎಂಬ ನಂಬಿಕೆ ಇದೆ ಎಂದಿರುವ ಅವರು ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. . ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ ನಂತರ ಪ್ರಣಬ್ ಮುಖರ್ಜಿ 2012 ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಗಳಾಗಿ ಕಾರ್ಯ ನಿರ್ವಹಿಸಿದ್ದರು.

ಪ್ರಣಬ್‌ ಮುಖರ್ಜಿ ಆರೋಗ್ಯ ಮತ್ತಷ್ಟು ಗಂಭೀರ; ವರ್ಷದ ಹಿಂದಿನ ಘಟನೆ ಸ್ಮರಿಸಿ ಪ್ರಾರ್ಥಿಸಿದ ಪುತ್ರಿ ಶರ್ಮಿಷ್ಠಾ

ಸೇನಾ ಆಸ್ಪತ್ರೆಯ ಬುಲೆಟಿನ್‌ ಪ್ರಕಾರ, ಪ್ರಣಬ್‌ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಎಲ್ಲ ಅಂಗಾಂಗಗಳು ಸ್ಥಿರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ತಜ್ಞ ವೈದ್ಯರಿಂದ ವಿಶೇಷ ನಿಗಾ ಇಡಲಾಗಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ; ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರಿಕೆ

84 ವರ್ಷದ ಪ್ರಣಬ್‌ ಮುಖರ್ಜಿ ಸೋಮವಾರ ಮಧ್ಯಾಹ್ನ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಹಿನ್ನೆಲೆ ಮೆದುಳಿನ ಶಸ್ತ್ರಚಿಕಿತ್ಸೆಗೆ ಅವರು ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದರೂ ಕೂಡ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅದಲ್ಲದೇ ಕೊರೊನಾ ಪರೀಕ್ಷೆಯ ವೇಳೆ ಅವರಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಹೀಗಾಗಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್‌) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಸೋಂಕು: ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ