ಆ್ಯಪ್ನಗರ

ಬಿಜೆಪಿ ಮಣಿಸಲು ಕಿಶೋರ್‌ ನೆರವು ಕೋರಿದ ಮಮತಾ

2021ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪ್ರಶಾಂತ್‌ ಕಿಶೋರ್‌ ತಂತ್ರಗಾರಿಕೆ?

PTI 7 Jun 2019, 5:00 am
ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಪ್ರಾಬಲ್ಯ ಕುಗ್ಗಿಸಲು ತೃಣಮೂಲ ಕಾಂಗ್ರೆಸ್‌ ವರಿಷ್ಠ ನಾಯಕಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ರಣತಂತ್ರ ನಿಪುಣ ಪ್ರಶಾಂತ್‌ ಕಿಶೋರ್‌ ಅವರ ನೆರವು ಕೋರಿದ್ದಾರೆ.
Vijaya Karnataka Web kishore


''ಹೌರಾದಲ್ಲಿರುವ ಪಶ್ಚಿಮ ಬಂಗಾಳ ಸಚಿವಾಲಯ ಕಟ್ಟಡದಲ್ಲಿ ಮುಖ್ಯಂಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪ್ರಶಾಂತ್‌ ಕಿಶೋರ್‌ ಗುರುವಾರ ಮಾತುಕತೆ ನಡೆಸಿದ್ದಾರೆ. ಮಮತಾ ಸೋದರ ಸಂಬಂಧಿ ಅಭಿಷೇಕ್‌ ಬ್ಯಾನರ್ಜಿ ಸಹ ಈ ವೇಳೆ ಉಪಸ್ಥಿತರಿದ್ದರು. ಮೂವರ ನಡುವೆ ಬರೋಬ್ಬರಿ 1 ಗಂಟೆ 40 ನಿಮಿಷ ಸಮಾಲೋಚನೆ ನಡೆದಿದೆ. 2021ರ ವಿಧಾನಸಭೆ ಚುನಾವಣೆಗೆ ತಂತ್ರ ರೂಪಿಸುವ ಕುರಿತು ತಾವು ಇನ್ನೊಂದು ತಿಂಗಳಲ್ಲಿ ಕೆಲಸ ಆರಂಭಿಸುವುದಾಗಿ ಕಿಶೋರ್‌ ಭರವಸೆ ನೀಡಿದ್ದಾರೆ,'' ಎಂದು ಮೂಲಗಳು ತಿಳಿಸಿವೆ.

ಪ್ರಶಾಂತ್‌ ಕಿಶೋರ್‌ ಅವರು ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷರೂ ಹೌದು. ರಾಜಕಾರಣದ ಜತೆಜತೆಯಲ್ಲೇ ತಮ್ಮ ವೃತ್ತಿಯನ್ನೂ ಮುಂದುವರಿಸುವುದಾಗಿ ಅವರು ಘೋಷಿಸಿದ್ದಾರೆ.

ಕಿಶೋರ್‌ ತಂತ್ರಗಾರಿಕೆ ಫಲಗಳು
1. 2014ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ಅಲೆ ಸೃಷ್ಟಿಸಿದ್ದು
2. 2015ರ ವಿಧಾನಸಭೆ ಚುನಾವಣೆ ಬಳಿಕ ಬಿಹಾರದಲ್ಲಿ ಜೆಡಿಯು-ಆರ್‌ಜೆಡಿ ಮೈತ್ರಿ ಸರಕಾರ ರಚನೆ
3. 2019ರ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಜಗನ್‌ಮೋಹನ್‌ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್‌ ಪಾರ್ಟಿಗೆ ಆಂಧ್ರಪ್ರದೇಶದಲ್ಲಿ ಅದ್ಭುತ ಗೆಲುವು


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ